ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.

ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm