ಬ್ರೇಕಿಂಗ್ ನ್ಯೂಸ್
22-02-21 06:14 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಬೆಂಗಳೂರು ಐಟಿ ಹಬ್ ಆದಂತೆ ಮಂಗಳೂರಿನಲ್ಲೂ ಸುಸಜ್ಜಿತ ತಂತ್ರಜ್ಞಾನ ಕೇಂದ್ರ ಒಂದನ್ನು ಆರಂಭಿಸಬೇಕೆಂಬ ಮಹತ್ತರ ಚಿಂತನೆ ಕಿಯೋನಿಕ್ಸ್ ಗೆ ಇದೆ. ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ವತಿಯಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು, ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಿಧಾನಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ.
ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಬೆಳೆಸುವ ಉದ್ದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಿ.ಎನ್, ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಉಪಸ್ಥಿತರಿದ್ದರು.
Keonics to organise Science Technology Program in Mangalore on 24th Feb said Harikrishna Bantwal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm