ಬ್ರೇಕಿಂಗ್ ನ್ಯೂಸ್
22-02-21 06:14 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಬೆಂಗಳೂರು ಐಟಿ ಹಬ್ ಆದಂತೆ ಮಂಗಳೂರಿನಲ್ಲೂ ಸುಸಜ್ಜಿತ ತಂತ್ರಜ್ಞಾನ ಕೇಂದ್ರ ಒಂದನ್ನು ಆರಂಭಿಸಬೇಕೆಂಬ ಮಹತ್ತರ ಚಿಂತನೆ ಕಿಯೋನಿಕ್ಸ್ ಗೆ ಇದೆ. ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ವತಿಯಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು, ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಿಧಾನಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ.
ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಬೆಳೆಸುವ ಉದ್ದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಿ.ಎನ್, ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಉಪಸ್ಥಿತರಿದ್ದರು.
Keonics to organise Science Technology Program in Mangalore on 24th Feb said Harikrishna Bantwal.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am