ಬ್ರೇಕಿಂಗ್ ನ್ಯೂಸ್
22-02-21 06:14 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಬೆಂಗಳೂರು ಐಟಿ ಹಬ್ ಆದಂತೆ ಮಂಗಳೂರಿನಲ್ಲೂ ಸುಸಜ್ಜಿತ ತಂತ್ರಜ್ಞಾನ ಕೇಂದ್ರ ಒಂದನ್ನು ಆರಂಭಿಸಬೇಕೆಂಬ ಮಹತ್ತರ ಚಿಂತನೆ ಕಿಯೋನಿಕ್ಸ್ ಗೆ ಇದೆ. ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ವತಿಯಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು, ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಿಧಾನಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ.
ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಬೆಳೆಸುವ ಉದ್ದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಿ.ಎನ್, ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಉಪಸ್ಥಿತರಿದ್ದರು.
Keonics to organise Science Technology Program in Mangalore on 24th Feb said Harikrishna Bantwal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm