ಬ್ರೇಕಿಂಗ್ ನ್ಯೂಸ್
24-02-21 10:37 am Mangalore Correspondent ಕರಾವಳಿ
ಮಂಗಳೂರು, ಫೆ.24: ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಿನಿ ವಿಧಾನ ಸೌಧದಲ್ಲಿ ಕಂದಾಯ ಇಲಾಖೆಯ ನಗರ ಸರ್ವೇಯರ್ ಆಗಿದ್ದ ಗಂಗಾಧರ್ ಎಂಬಾತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಮಂಗಳೂರು ನಗರದಲ್ಲಿ ನಾಗರಿಕರೊಬ್ಬರು ತಮ್ಮ ಕಚೇರಿಯ ಪೀಠೋಪಕರಣಕ್ಕಾಗಿ ಮನೆ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಸಲ್ಲಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆ ಮೂರು ಸಾವಿರವನ್ನೂ ಕೊಟ್ಟಿದ್ದರು. ಆದರೆ, ಮತ್ತೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡದೆ ಮತ್ತೆ 30,000 ರೂ. ನೀಡುವಂತೆ ಡಿಮಾಂಡ್ ಇಟ್ಟಿದ್ದರು.

ಇದರಿಂದ ನೊಂದ ವ್ಯಕ್ತಿ ಮಂಗಳೂರಿನ ಎನ್ಇಸಿಎಫ್ ತಂಡದ ಸದಸ್ಯರ ಗಮನಕ್ಕೆ ತಂದಿದ್ದು ಬಳಿಕ ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಗಮನಕ್ಕೆ ತರಲಾಯಿತು. ಮೂರು ದಿನಗಳ ಬಳಿಕ ಮಂಗಳವಾರ ಸಂಜೆ 5.30 ರ ವೇಳೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡಿ, 20 ಸಾವಿರ ಲಂಚದ ಹಣ ತೆಗೆದುಕೊಳ್ಳುತ್ತಿದ್ದಾಗಲೇ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಎಸಿಬಿ ತಂಡ ಬಂಧಿಸಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು.
A revenue department surveyor was caught red-handed by the ACB officers for taking a bribe. The accused has been identified as Gangadhar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm