ಬ್ರೇಕಿಂಗ್ ನ್ಯೂಸ್
24-02-21 10:37 am Mangalore Correspondent ಕರಾವಳಿ
ಮಂಗಳೂರು, ಫೆ.24: ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಿನಿ ವಿಧಾನ ಸೌಧದಲ್ಲಿ ಕಂದಾಯ ಇಲಾಖೆಯ ನಗರ ಸರ್ವೇಯರ್ ಆಗಿದ್ದ ಗಂಗಾಧರ್ ಎಂಬಾತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಮಂಗಳೂರು ನಗರದಲ್ಲಿ ನಾಗರಿಕರೊಬ್ಬರು ತಮ್ಮ ಕಚೇರಿಯ ಪೀಠೋಪಕರಣಕ್ಕಾಗಿ ಮನೆ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಸಲ್ಲಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆ ಮೂರು ಸಾವಿರವನ್ನೂ ಕೊಟ್ಟಿದ್ದರು. ಆದರೆ, ಮತ್ತೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡದೆ ಮತ್ತೆ 30,000 ರೂ. ನೀಡುವಂತೆ ಡಿಮಾಂಡ್ ಇಟ್ಟಿದ್ದರು.

ಇದರಿಂದ ನೊಂದ ವ್ಯಕ್ತಿ ಮಂಗಳೂರಿನ ಎನ್ಇಸಿಎಫ್ ತಂಡದ ಸದಸ್ಯರ ಗಮನಕ್ಕೆ ತಂದಿದ್ದು ಬಳಿಕ ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಗಮನಕ್ಕೆ ತರಲಾಯಿತು. ಮೂರು ದಿನಗಳ ಬಳಿಕ ಮಂಗಳವಾರ ಸಂಜೆ 5.30 ರ ವೇಳೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡಿ, 20 ಸಾವಿರ ಲಂಚದ ಹಣ ತೆಗೆದುಕೊಳ್ಳುತ್ತಿದ್ದಾಗಲೇ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಎಸಿಬಿ ತಂಡ ಬಂಧಿಸಿದೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು.
A revenue department surveyor was caught red-handed by the ACB officers for taking a bribe. The accused has been identified as Gangadhar.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm