ಬ್ರೇಕಿಂಗ್ ನ್ಯೂಸ್
24-02-21 11:39 am Mangalore Correspondent ಕರಾವಳಿ
ಉಳ್ಳಾಲ, ಫೆ.24: ತೊಕ್ಕೊಟ್ಟಿನ ಒಳಪೇಟೆಯ ಮಾರುಕಟ್ಟೆ ಬಳಿ ರೈಲ್ವೇ ಜಾಗದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಮೂರು ಬೀಫ್ ಸ್ಟಾಲ್ ಗಳನ್ನು ತೆರವುಗೊಳಿಸುವಂತೆ ವಿಶ್ವ ಹಿಂದು ಪರಿಷತ್ ಬಜರಂಗದಳ ಉಳ್ಳಾಲ ಪ್ರಖಂಡವು ಪೊಲೀಸರಿಗೆ ಮತ್ತೆ ಆಗ್ರಹಿಸಿದೆ.
ಕಳೆದ ಜನವರಿ ತಿಂಗಳಲ್ಲಿ ಇದೇ ಮೂರು ಬೀಫ್ ಸ್ಟಾಲ್ ಗಳ ತೆರವಿಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳವು ಉಳ್ಳಾಲ ಠಾಣೆಗೆ ದೂರು ನೀಡಿದ ಬೆನ್ನಲ್ಲೆ ಜನವರಿ 8 ರ ರಾತ್ರಿ ದುಷ್ಕರ್ಮಿಯೊಬ್ಬ ಬೀಫ್ ಸ್ಟಾಲ್ ಗಳಿಗೆ ಬೆಂಕಿಹಚ್ಚಿದ ಪ್ರಕರಣ ತೀವ್ರ ಸ್ವರೂಪ ಪಡೆದಿತ್ತು. ಒತ್ತಡಕ್ಕೆ ಬಿದ್ದ ಪೊಲೀಸರು ಸಿಸಿಟಿವಿ ಆಧಾರದಲ್ಲಿ ಬೆಂಕಿ ಇಟ್ಟ ಆರೋಪಿಯನ್ನು ಬಂಧಿಸಿದ್ದರು.

ಸುಟ್ಟು ಹೋಗಿದ್ದ ಬೀಫ್ ಸ್ಟಾಲ್ ಗಳನ್ನು ಉಳ್ಳಾಲ ನಗರಸಭೆ ಆಡಳಿತವು ಮತ್ತೆ ಪುನರ್ ನಿರ್ಮಿಸಿ ಕೊಟ್ಟಿದ್ದು ಇದೀಗ ಬೀಫ್ ವ್ಯವಹಾರ ನಡೆಯುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು ಈ ಬಗ್ಗೆ ಹಲವು ಮಾನದಂಡಗಳನ್ನು ಸರಕಾರ ವಿಧಿಸಿದೆ. ಆದರೆ ಉಳ್ಳಾಲ ವ್ಯಾಪ್ತಿಯಲ್ಲಿ ಈ ಕಾನೂನು ಎಲ್ಲಿಯೂ ಅನ್ವಯವಾಗದೆ ಅಕ್ರಮ ಕಸಾಯಿಖಾನೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ.

ತೊಕ್ಕೊಟ್ಟು ಒಳಪೇಟೆಯ ಮೂರು ಬೀಫ್ ಸ್ಟಾಲ್ ಗಳು ಪರವಾನಿಗೆ ಇಲ್ಲದೆ ವ್ಯವಹಾರ ನಡೆಸುತ್ತಿದ್ದರೂ ಕ್ರಮ ಯಾಕಿಲ್ಲ ಎನ್ನುವ ಪ್ರಶ್ನೆಯನ್ನು ಕಾರ್ಯಕರ್ತರು ಕೇಳುತ್ತಿದ್ದಾರೆ. ಪೊಲೀಸರು ಒಳಪೇಟೆಯ 3 ಅಕ್ರಮ ಕಸಾಯಿ ಖಾನೆಗಳು ಮತ್ತು ಇಲ್ಲಿಗೆ ಅಕ್ರಮವಾಗಿ ಗೋಮಾಂಸ ಸರಬರಾಜು ಮಾಡುವ ವಾಹನ ಮತ್ತು ಕಸಾಯಿಖಾನೆಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬಜರಂಗದಳವು ಮತ್ತೆ ಆಗ್ರಹಿಸಿದ್ದು ಉಳ್ಳಾಲ ಪೊಲೀಸರಿಗೆ ಮನವಿ ನೀಡಿದ್ದಾರೆ.

ಈ ಬಗ್ಗೆ ಲಿಖಿತ ದೂರನ್ನು ವಿಶ್ವ ಹಿಂದು ಪರಿಷತ್, ಬಜರಂಗದಳ ಮುಖಂಡರು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರಿಗೆ ನೀಡಿದ್ದಾರೆ. ಬಜರಂಗದಳ ಜಿಲ್ಲಾ ಸಹ ಗೋರಕ್ಷ ಪ್ರಮುಖ್ ಪವಿತ್ರ ಕೆರೆಬೈಲು, ಬಜರಂಗದಳ ಪ್ರಖಂಡ ಸಂಚಾಲಕ ಅರ್ಜುನ್, ಪ್ರಖಂಡ ಗೋರಕ್ಷ ಪ್ರಮುಖ್ ರಕ್ಷಿತ್, ಸಾಪ್ತಾಹಿಕ ಪ್ರಮುಖ್ ಕೌಶಿಕ್ ಉಪಸ್ಥಿತರಿದ್ದರು.
ತೊಕ್ಕೊಟ್ಟಿನಲ್ಲಿ ಅಕ್ರಮ ಬೀಫ್ ಸ್ಟಾಲ್ ; ತೆರವಿಗೆ ಆಗ್ರಹಿಸಿ ಬಜರಂಗದಳ ದೂರು
Three Unauthorised beef staffs in Ullal found VHP activists demand serious action against them. A case has been filed at Ullal police station in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm