ಬ್ರೇಕಿಂಗ್ ನ್ಯೂಸ್
24-02-21 04:59 pm Mangaluru correspondant ಕರಾವಳಿ
ಮಂಗಳೂರು, ಫೆ.24: ಕೋವಿಡ್ ಭೀತಿಯಲ್ಲಿ ಕೇರಳದ ಕಡೆಯಿಂದ ಬರುವ ಮಂದಿಗೆ ಗಡಿ ನಿರ್ಬಂಧಿಸುವ ಆದೇಶದಿಂದ ಉಸಿರು ಕಟ್ಟಿದ್ದ ಕಾಸರಗೋಡು ನಿವಾಸಿಗಳಿಗೆ ಡಿಸಿಎಂ ಅಶ್ವತ್ಥ ನಾರಾಯಣ್ ರಿಲೀಫ್ ನೀಡಿದ್ದಾರೆ.
ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅಶ್ವತ್ಥ್ ನಾರಾಯಣ ಬಳಿ ಈ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಸರಗೋಡಿನಿಂದ ಅತಿ ಹೆಚ್ಚು ಮಂದಿ ಮಂಗಳೂರನ್ನು ಆಶ್ರಯಿಸಿದ್ದಾರೆ. ದಿನವೂ ಬಂದು ಹೋಗುವ ಮಂದಿಯನ್ನು ಎಷ್ಟೂಂತ ಪರೀಕ್ಷೆಗೆ ಒಳಪಡಿಸಬೇಕು. ದಿನಾ ಬರುವ ಮಂದಿ ಎಲ್ಲಿಂದ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ನಿತ್ಯ ಶಾಲೆ, ಕಾಲೇಜು, ಉದ್ಯೋಗಕ್ಕೆಂದು ಬರುವ ಕಾಸರಗೋಡಿನ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯದಿಂದ ರಿಲೀಫ್ ಕೊಡಲಾಗುವುದು. ಅವರಿಗೆ ನೆಗೆಟಿವ್ ರಿಪೋರ್ಟ್ ಬದಲು ಆರೋಗ್ಯ ಸೇತು ಏಪ್ ನಲ್ಲಿ ಮಾನಿಟರ್ ಮಾಡುವಂತೆ ಆಗಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಚಿವ ಸುಧಾಕರ್ ಗೆ ತಿಳಿಸುತ್ತೇನೆ. ಇದರ ಬದಲು, ಇಲ್ಲೇ ಬಂದು ಇರೋರು ಕಡ್ಡಾಯ ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದರು.


ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಆಯಾ ಪಕ್ಷದವರು ನಿರ್ಧಾರ ಮಾಡುತ್ತಾರೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಒಳ್ಳೆಯದೇ. ನಾವು ಮಾಡಿಕೊಳ್ಳಿ ಅಂತಲೇ ಹೇಳುತ್ತೇವೆ. ಅವರು ಒಟ್ಟಿಗೆ ಹೋಗುವುದಾದರೆ ನಮಗೇನು ಸಮಸ್ಯೆ ಇಲ್ಲ. ಅವರ ಪಕ್ಷದ ನಿಲುವನ್ನು ಕುಮಾರಸ್ವಾಮಿಯವರು ನಿಶ್ಚಯ ಮಾಡಿಕೊಳ್ಳಬೇಕು.


ಸ್ಥಳೀಯ ಒಡಂಬಡಿಕೆ, ಒಪ್ಪಂದಗಳನ್ನು ಅನುಸರಿಸಿ ಮೈತ್ರಿ ಮಾಡಿಕೊಳ್ಳುತ್ತಾರೆ. ಕಾಲಕ್ರಮೇಣ ಈ ಮೈತ್ರಿಯಿಂದ ಏನಾಗುತ್ತೆ ಅಂತ ಅವರಿಗೆ ಗೊತ್ತಿದೆ. ಕಾಂಗ್ರೆಸ್ ಜೊತೆ ಸರಕಾರ ಮಾಡಿ, ಏನಾಯ್ತು ಅನ್ನೋದು ಅವರಿಗೆ ಗೊತ್ತಿದೆ. ಅದರ ಅನುಭವ ಕುಮಾರಸ್ವಾಮಿಗೆ ಇದೆ. ಕಾಂಗ್ರೆಸ್ ಪಕ್ಷ ಜೆಡಿಎಸ್ ಅನ್ನು ಹೇಗೆ ನುಂಗಿಕೊಳ್ಳೋ ಪ್ರಯತ್ನ ಮಾಡಿದ್ದಾರೆ ಅನ್ನೋದನ್ನು ನೋಡಿಕೊಳ್ಳಬೇಕು. ತಮ್ಮ ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಯೋಚನೆ ಮಾಡಲಿ ಎಂದು ಹೇಳಿದರು.
ತಲಪಾಡಿ ಟೋಲ್ ಬಹಿಷ್ಕರಿಸಿ ಸ್ಥಳೀಯರ ಪ್ರತಿಭಟನೆ ; ಗೂಂಡಾಗಿರಿಗೆ ಬುದ್ಧಿ ಕಲಿಸಲು ರೆಡಿ ಎಂದ ಜನ !
Covid Negative report test not mandatory for those entering Mangalore from Kerala state orders DCM Ashwath Narayan in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm