ಬ್ರೇಕಿಂಗ್ ನ್ಯೂಸ್
24-02-21 08:39 pm Mangaluru correspondant ಕರಾವಳಿ
ಮಂಗಳೂರು, ಫೆ.24: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬರುವ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ, ಈ ರೀತಿಯ ಆದೇಶ ಮಾಡಿದ್ದರೂ, ಮುಂಬೈ ಕಡೆಯಿಂದ ಬರುವ ಪ್ಯಾಸೆಂಜರ್ ಬಸ್ ಗಳು ಈಗ ಒಳದಾರಿಯಿಂದ ಕರ್ನಾಟಕಕ್ಕೆ ಬರುತ್ತಿರುವುದಾಗಿ ದೂರು ಕೇಳಿಬಂದಿದೆ.
ಮಂಗಳೂರಿನಿಂದ ವಯಾ ಬೆಳಗಾವಿ ಮೂಲಕ ಮುಂಬೈಗೆ ದಿನವೂ 18 ಬಸ್ ಗಳು ಸಂಚರಿಸುತ್ತವೆ. ದಿನವೂ ಮಂಗಳೂರಿನಿಂದ ತೆರಳುವ ಬಸ್, ಅಷ್ಟೇ ಸಂಖ್ಯೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಹಿಂತಿರುಗಿ ಬರುತ್ತದೆ. ಈ ಬಸ್ ಗಳೆಲ್ಲ ಸಾಮಾನ್ಯವಾಗಿ ಬೆಳಗಾವಿಯಿಂದ ಕೊಲ್ಲಾಪುರ ಚೆಕ್ ಪೋಸ್ಟ್ ಮೂಲಕವೇ ಹೋಗುವುದು ಮತ್ತು ಬರುವುದನ್ನು ಮಾಡುತ್ತದೆ. ಆದರೆ, ಈಗ ಕೋವಿಡ್ ನಿರ್ಬಂಧ ವಿಧಿಸಿರುವ ಕಾರಣ ಕೊಲ್ಲಾಪುರ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಬರುವ ಬಸ್ ಗಳನ್ನು ತಡೆಯಲಾಗುತ್ತದೆ.


ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ಮಾಡಲಾಗುತ್ತದೆ. ಆದರೆ, 72 ಗಂಟೆಗಳ ಹಿಂದೆ ಪಡೆದ ನೆಗೆಟಿವ್ ರಿಪೋರ್ಟ್ ಹೆಚ್ಚಿನ ಮಂದಿಯಲ್ಲಿ ಇರುವುದಿಲ್ಲ. ಹೀಗಾಗಿ ಬಸ್ ಗಳನ್ನು ಕೊಲ್ಲಾಪುರದಿಂದ ಕರ್ನಾಟಕ ಪ್ರವೇಶ ಮಾಡಲು ಬಿಡುವುದಿಲ್ಲ. ಅಧಿಕಾರಿಗಳ ಕಿರಿ ಕಿರಿಯನ್ನು ತಪ್ಪಿಸುವುದಕ್ಕಾಗಿ ಈಗ ಮಂಗಳೂರಿನ ಬಸ್ ಗಳು ಒಳದಾರಿಯನ್ನು ಕಂಡುಕೊಂಡಿವೆ ಎನ್ನುತ್ತಾರೆ, ಪ್ರಯಾಣಿಕರು.
ಕೊಲ್ಲಾಪುರ ಹೈವೇ ಬದಲಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಎಂಬಲ್ಲಿ ಕಾಡುದಾರಿ ಮೂಲಕ ಬಸ್ ಗಳು ಕರ್ನಾಟಕ ಪ್ರವೇಶ ಮಾಡುತ್ತಿದ್ದು, ಚೆಕ್ಕಿಂಗ್ ತಪ್ಪಿಸ್ಕೊಂಡು ಒಳಬರುತ್ತಿವೆ ಎನ್ನಲಾಗಿದೆ. ದಿನವೂ ಬಸ್ ಸೀಟು ಭರ್ತಿ ಮಾಡಿಕೊಂಡು ಬಂದರೆ, ಮಂಗಳೂರು ನಗರ ಒಂದಕ್ಕೆ 18 ಬಸ್ ಗಳಲ್ಲಿ ಸುಮಾರು 900 ಮಂದಿ ಬರುತ್ತಾರೆ. ಇದೇ ರೀತಿ ಬೇರೆ ಬೇರೆ ನಗರಗಳಿಗೂ ಒಳದಾರಿ ಮೂಲಕ ಬಸ್ ಗಳು ಬರುತ್ತಿದ್ದು, ಕರ್ನಾಟಕದ ಗಡಿ ನಿರ್ಬಂಧ ಹೆಸರಿಗಷ್ಟೇ ಅನ್ನುವ ಮಾತು ಕೇಳಿಬರುತ್ತಿದೆ.
ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಕೋವಿಡ್ ಪೀಡಿತರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ. ಆದರೆ, ಟೂರಿಸ್ಟ್ ಬಸ್ ಗಳು ಸರಕಾರದ ಆದೇಶವನ್ನು ಗಾಳಿಗೆ ತೂರಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
It has come to light that Mangalore-Mumbai buses take shortcuts to evade check-post of Kolhapur because health officer demand covid negative report of passengers.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm