ಬ್ರೇಕಿಂಗ್ ನ್ಯೂಸ್
24-02-21 08:39 pm Mangaluru correspondant ಕರಾವಳಿ
ಮಂಗಳೂರು, ಫೆ.24: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬರುವ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ, ಈ ರೀತಿಯ ಆದೇಶ ಮಾಡಿದ್ದರೂ, ಮುಂಬೈ ಕಡೆಯಿಂದ ಬರುವ ಪ್ಯಾಸೆಂಜರ್ ಬಸ್ ಗಳು ಈಗ ಒಳದಾರಿಯಿಂದ ಕರ್ನಾಟಕಕ್ಕೆ ಬರುತ್ತಿರುವುದಾಗಿ ದೂರು ಕೇಳಿಬಂದಿದೆ.
ಮಂಗಳೂರಿನಿಂದ ವಯಾ ಬೆಳಗಾವಿ ಮೂಲಕ ಮುಂಬೈಗೆ ದಿನವೂ 18 ಬಸ್ ಗಳು ಸಂಚರಿಸುತ್ತವೆ. ದಿನವೂ ಮಂಗಳೂರಿನಿಂದ ತೆರಳುವ ಬಸ್, ಅಷ್ಟೇ ಸಂಖ್ಯೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಹಿಂತಿರುಗಿ ಬರುತ್ತದೆ. ಈ ಬಸ್ ಗಳೆಲ್ಲ ಸಾಮಾನ್ಯವಾಗಿ ಬೆಳಗಾವಿಯಿಂದ ಕೊಲ್ಲಾಪುರ ಚೆಕ್ ಪೋಸ್ಟ್ ಮೂಲಕವೇ ಹೋಗುವುದು ಮತ್ತು ಬರುವುದನ್ನು ಮಾಡುತ್ತದೆ. ಆದರೆ, ಈಗ ಕೋವಿಡ್ ನಿರ್ಬಂಧ ವಿಧಿಸಿರುವ ಕಾರಣ ಕೊಲ್ಲಾಪುರ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಬರುವ ಬಸ್ ಗಳನ್ನು ತಡೆಯಲಾಗುತ್ತದೆ.


ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ಮಾಡಲಾಗುತ್ತದೆ. ಆದರೆ, 72 ಗಂಟೆಗಳ ಹಿಂದೆ ಪಡೆದ ನೆಗೆಟಿವ್ ರಿಪೋರ್ಟ್ ಹೆಚ್ಚಿನ ಮಂದಿಯಲ್ಲಿ ಇರುವುದಿಲ್ಲ. ಹೀಗಾಗಿ ಬಸ್ ಗಳನ್ನು ಕೊಲ್ಲಾಪುರದಿಂದ ಕರ್ನಾಟಕ ಪ್ರವೇಶ ಮಾಡಲು ಬಿಡುವುದಿಲ್ಲ. ಅಧಿಕಾರಿಗಳ ಕಿರಿ ಕಿರಿಯನ್ನು ತಪ್ಪಿಸುವುದಕ್ಕಾಗಿ ಈಗ ಮಂಗಳೂರಿನ ಬಸ್ ಗಳು ಒಳದಾರಿಯನ್ನು ಕಂಡುಕೊಂಡಿವೆ ಎನ್ನುತ್ತಾರೆ, ಪ್ರಯಾಣಿಕರು.
ಕೊಲ್ಲಾಪುರ ಹೈವೇ ಬದಲಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಎಂಬಲ್ಲಿ ಕಾಡುದಾರಿ ಮೂಲಕ ಬಸ್ ಗಳು ಕರ್ನಾಟಕ ಪ್ರವೇಶ ಮಾಡುತ್ತಿದ್ದು, ಚೆಕ್ಕಿಂಗ್ ತಪ್ಪಿಸ್ಕೊಂಡು ಒಳಬರುತ್ತಿವೆ ಎನ್ನಲಾಗಿದೆ. ದಿನವೂ ಬಸ್ ಸೀಟು ಭರ್ತಿ ಮಾಡಿಕೊಂಡು ಬಂದರೆ, ಮಂಗಳೂರು ನಗರ ಒಂದಕ್ಕೆ 18 ಬಸ್ ಗಳಲ್ಲಿ ಸುಮಾರು 900 ಮಂದಿ ಬರುತ್ತಾರೆ. ಇದೇ ರೀತಿ ಬೇರೆ ಬೇರೆ ನಗರಗಳಿಗೂ ಒಳದಾರಿ ಮೂಲಕ ಬಸ್ ಗಳು ಬರುತ್ತಿದ್ದು, ಕರ್ನಾಟಕದ ಗಡಿ ನಿರ್ಬಂಧ ಹೆಸರಿಗಷ್ಟೇ ಅನ್ನುವ ಮಾತು ಕೇಳಿಬರುತ್ತಿದೆ.
ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಕೋವಿಡ್ ಪೀಡಿತರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ. ಆದರೆ, ಟೂರಿಸ್ಟ್ ಬಸ್ ಗಳು ಸರಕಾರದ ಆದೇಶವನ್ನು ಗಾಳಿಗೆ ತೂರಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
It has come to light that Mangalore-Mumbai buses take shortcuts to evade check-post of Kolhapur because health officer demand covid negative report of passengers.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm