ಬ್ರೇಕಿಂಗ್ ನ್ಯೂಸ್
24-02-21 08:39 pm Mangaluru correspondant ಕರಾವಳಿ
ಮಂಗಳೂರು, ಫೆ.24: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬರುವ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ, ಈ ರೀತಿಯ ಆದೇಶ ಮಾಡಿದ್ದರೂ, ಮುಂಬೈ ಕಡೆಯಿಂದ ಬರುವ ಪ್ಯಾಸೆಂಜರ್ ಬಸ್ ಗಳು ಈಗ ಒಳದಾರಿಯಿಂದ ಕರ್ನಾಟಕಕ್ಕೆ ಬರುತ್ತಿರುವುದಾಗಿ ದೂರು ಕೇಳಿಬಂದಿದೆ.
ಮಂಗಳೂರಿನಿಂದ ವಯಾ ಬೆಳಗಾವಿ ಮೂಲಕ ಮುಂಬೈಗೆ ದಿನವೂ 18 ಬಸ್ ಗಳು ಸಂಚರಿಸುತ್ತವೆ. ದಿನವೂ ಮಂಗಳೂರಿನಿಂದ ತೆರಳುವ ಬಸ್, ಅಷ್ಟೇ ಸಂಖ್ಯೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಹಿಂತಿರುಗಿ ಬರುತ್ತದೆ. ಈ ಬಸ್ ಗಳೆಲ್ಲ ಸಾಮಾನ್ಯವಾಗಿ ಬೆಳಗಾವಿಯಿಂದ ಕೊಲ್ಲಾಪುರ ಚೆಕ್ ಪೋಸ್ಟ್ ಮೂಲಕವೇ ಹೋಗುವುದು ಮತ್ತು ಬರುವುದನ್ನು ಮಾಡುತ್ತದೆ. ಆದರೆ, ಈಗ ಕೋವಿಡ್ ನಿರ್ಬಂಧ ವಿಧಿಸಿರುವ ಕಾರಣ ಕೊಲ್ಲಾಪುರ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಬರುವ ಬಸ್ ಗಳನ್ನು ತಡೆಯಲಾಗುತ್ತದೆ.


ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ಮಾಡಲಾಗುತ್ತದೆ. ಆದರೆ, 72 ಗಂಟೆಗಳ ಹಿಂದೆ ಪಡೆದ ನೆಗೆಟಿವ್ ರಿಪೋರ್ಟ್ ಹೆಚ್ಚಿನ ಮಂದಿಯಲ್ಲಿ ಇರುವುದಿಲ್ಲ. ಹೀಗಾಗಿ ಬಸ್ ಗಳನ್ನು ಕೊಲ್ಲಾಪುರದಿಂದ ಕರ್ನಾಟಕ ಪ್ರವೇಶ ಮಾಡಲು ಬಿಡುವುದಿಲ್ಲ. ಅಧಿಕಾರಿಗಳ ಕಿರಿ ಕಿರಿಯನ್ನು ತಪ್ಪಿಸುವುದಕ್ಕಾಗಿ ಈಗ ಮಂಗಳೂರಿನ ಬಸ್ ಗಳು ಒಳದಾರಿಯನ್ನು ಕಂಡುಕೊಂಡಿವೆ ಎನ್ನುತ್ತಾರೆ, ಪ್ರಯಾಣಿಕರು.
ಕೊಲ್ಲಾಪುರ ಹೈವೇ ಬದಲಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಎಂಬಲ್ಲಿ ಕಾಡುದಾರಿ ಮೂಲಕ ಬಸ್ ಗಳು ಕರ್ನಾಟಕ ಪ್ರವೇಶ ಮಾಡುತ್ತಿದ್ದು, ಚೆಕ್ಕಿಂಗ್ ತಪ್ಪಿಸ್ಕೊಂಡು ಒಳಬರುತ್ತಿವೆ ಎನ್ನಲಾಗಿದೆ. ದಿನವೂ ಬಸ್ ಸೀಟು ಭರ್ತಿ ಮಾಡಿಕೊಂಡು ಬಂದರೆ, ಮಂಗಳೂರು ನಗರ ಒಂದಕ್ಕೆ 18 ಬಸ್ ಗಳಲ್ಲಿ ಸುಮಾರು 900 ಮಂದಿ ಬರುತ್ತಾರೆ. ಇದೇ ರೀತಿ ಬೇರೆ ಬೇರೆ ನಗರಗಳಿಗೂ ಒಳದಾರಿ ಮೂಲಕ ಬಸ್ ಗಳು ಬರುತ್ತಿದ್ದು, ಕರ್ನಾಟಕದ ಗಡಿ ನಿರ್ಬಂಧ ಹೆಸರಿಗಷ್ಟೇ ಅನ್ನುವ ಮಾತು ಕೇಳಿಬರುತ್ತಿದೆ.
ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಕೋವಿಡ್ ಪೀಡಿತರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ. ಆದರೆ, ಟೂರಿಸ್ಟ್ ಬಸ್ ಗಳು ಸರಕಾರದ ಆದೇಶವನ್ನು ಗಾಳಿಗೆ ತೂರಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
It has come to light that Mangalore-Mumbai buses take shortcuts to evade check-post of Kolhapur because health officer demand covid negative report of passengers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm