ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm