ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm