ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.
ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm