ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm