ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.
ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am