ಬ್ರೇಕಿಂಗ್ ನ್ಯೂಸ್
18-08-20 12:47 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 18: ಕುಡಿತದ ಅಮಲಿನಲ್ಲಿ ಮಗನೇ ತಂದೆಯನ್ನು ಕಡಿದು ಕೊಲೆಗೈದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ ಸಿಕ್ಕಿದ ಕತ್ತಿಯಿಂದ ತಂದೆಯ ಮೇಲೆ ಕಡಿದಿದ್ದು, ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. 68 ವರ್ಷದ ಗಂಗಾಧರ ನಾಯ್ಕ ಕೊಲೆಯಾದವರಾಗಿದ್ದು ಪುತ್ರ ಶಶಿಧರ್ ನಾಯ್ಕ್ ಹತ್ಯೆಗೈದ ಆರೋಪಿಯಾಗಿದ್ದಾನೆ.


ಅತ್ಯಂತ ಸ್ಥಿತಿವಂತ ಕುಟುಂಬವಾಗಿರುವ ಶಶಿಧರ್ ನಾಯ್ಕ್ ಹಾಗೂ ಆತನ ತಂದೆ ಗಂಗಾಧರ್ ನಾಯ್ಕ್ ತಿಂಗಳಾಡಿಯ ಬಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕುಟುಂಬಕ್ಕೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿಯೂ ಒಂದು ಮನೆಯಿದೆ. ಸ್ಥಿತಿವಂತ ಕುಟುಂಬದ ಮಗನಾದ ಶಶಿಧರ್ ನಾಯ್ಕ್ ಗೆ ಕುಡಿತದ ಜೊತೆಗೆ ಗಾಂಜಾದ ಚಟ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಎಂದಿನಂತೆ ಕುಡಿದು ಮನೆಗೆ ಬಂದಿದ್ದ ಶಶಿಧರ್ ಕ್ಷುಲ್ಲಕ ವಿಚಾರಕ್ಕೆ ತಂದೆಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ತಂದೆ ಹಾಗೂ ಮಗನ ನಡುವೆ ತಳ್ಳಾಟ ನಡೆದಿದೆ. ರೊಚ್ಚಿಗೆದ್ದ ಶಶಿಧರ್ ನಾಯ್ಕ್ ಮನೆಯಲ್ಲೇ ಇದ್ದ ಕತ್ತಿಯಿಂದ ತಂದೆ ಗಂಗಾಧರ್ ನಾಯ್ಕ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾನೆ. ಗಂಗಾಧರ್ ನಾಯ್ಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm