ಬ್ರೇಕಿಂಗ್ ನ್ಯೂಸ್
27-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.27: ಆರೋಪಿಗಳಿಗೆ ಸೇರಿದ ಕಾರನ್ನು ಮಾರಾಟ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಬೆನ್ನಲ್ಲೇ ಆರೋಪ ಕೇಳಿಬಂದ ಇಬ್ಬರು ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಮಾನತು ಮಾಡಿದ್ದಾರೆ.
ಈ ಹಿಂದೆ ಮಂಗಳೂರು ಸಿಸಿಬಿ ತಂಡದಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ಪಾಂಡೇಶ್ವರದ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯ ಇನ್ ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಳೆದ ಅಕ್ಟೋಬರ್ 16ರಂದು ಮಂಗಳೂರಿನ ನಾರ್ಕೋಟಿಕ್ ಠಾಣೆಯಲ್ಲಿ ಹಣ ಡಬ್ಲಿಂಗ್ ಜಾಲದ ಆರೋಪದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಇಬ್ಬರನ್ನು ಸಿಸಿಬಿ ತಂಡ ಬಂಧಿಸಿದ್ದು, ಆರೋಪಿಗಳಿಗೆ ಸೇರಿದ ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು.
ಆದರೆ, ಆರೋಪಿಗಳನ್ನು ಪ್ರಕರಣದಿಂದ ಬಚಾವ್ ಮಾಡಲೆಂದು ಹಣ ಕೇಳಿದ್ದಾರೆ ಎನ್ನಲಾಗಿದ್ದು, ಹಣ ಇಲ್ಲದ್ದಕ್ಕೆ ಕಾರು ಮಾರಾಟ ಮಾಡುವಂತೆ ಡೀಲ್ ಆಗಿತ್ತು. ಇದೆಲ್ಲ ನಡೆದು ವಾರ ಕಳೆಯುವಷ್ಟರಲ್ಲಿ ಎಸ್ಐ ಕಬ್ಬಾಳರಾಜ್ ಮಂಗಳೂರಿನಿಂದ ಚಿಕ್ಕಮಗಳೂರಿಗೆ ವರ್ಗ ಆಗಿದ್ದರು. ಇವರಿಗೆ ಸಾಥ್ ನೀಡಿದ್ದಾರೆ ಎನ್ನಲಾಗಿದ್ದ ಅಂದಿನ ಕಮಿಷನರ್ ವಿಕಾಸ್ ಕುಮಾರ್ ಕೂಡ ವರ್ಗ ಆಗಿದ್ದರು. ಆದರೆ, ಕಾರು ಡೀಲಿಂಗ್ ಪ್ರಕರಣ ತಿಂಗಳ ನಂತರ ಲೀಕ್ ಆಗಿದ್ದು, ಈಗ ಮಂಗಳೂರು ಪೊಲೀಸರಿಗೆ ಭಾರೀ ಮುಜುಗರ ತಂದಿಟ್ಟಿದೆ.
ಪ್ರಕರಣದ ಬಗ್ಗೆ ಮಂಗಳೂರು ಡಿಸಿಪಿ ವಿನಯ ಗಾಂವ್ಕರ್ ರಾಜ್ಯದ ಪೊಲೀಸ್ ವರಿಷ್ಠರಿಗೆ ವರದಿ ನೀಡಿದ್ದು, ಅದರಂತೆ ಇಬ್ಬರು ಅಧಿಕಾರಿಗಳನ್ನು ಪ್ರಾಥಮಿಕ ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಅಲ್ಲದೆ, ಹಣ ಡಬ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಾರು ಡೀಲಿಂಗ್ ಪ್ರಕರಣದಲ್ಲಿ ಎಸಿಪಿ ದರ್ಜೆಯ ಒಬ್ಬ ಅಧಿಕಾರಿ ಮತ್ತು ಸಿಸಿಬಿಯಲ್ಲಿದ್ದ ಕೆಲವು ಅಧಿಕಾರಿಗಳ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಾಗಲೇ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದ್ದು, ಉಳಿದವರ ಸರದಿ ಇನ್ನಷ್ಟೇ ಇದೆ ಎನ್ನುವ ಅಂಶವನ್ನು ಪೊಲೀಸ್ ಮೂಲಗಳು ತಿಳಿಸಿವೆ.
Luxury car missing in CCB Police Custody Two Police officers Kabbal Raj and Ramkrishana has been suspended. The order has been issued by DGP, Karnataka.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm