ಬ್ರೇಕಿಂಗ್ ನ್ಯೂಸ್
27-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.27: ಆರೋಪಿಗಳಿಗೆ ಸೇರಿದ ಕಾರನ್ನು ಮಾರಾಟ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಬೆನ್ನಲ್ಲೇ ಆರೋಪ ಕೇಳಿಬಂದ ಇಬ್ಬರು ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಮಾನತು ಮಾಡಿದ್ದಾರೆ.

ಈ ಹಿಂದೆ ಮಂಗಳೂರು ಸಿಸಿಬಿ ತಂಡದಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ಪಾಂಡೇಶ್ವರದ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯ ಇನ್ ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಳೆದ ಅಕ್ಟೋಬರ್ 16ರಂದು ಮಂಗಳೂರಿನ ನಾರ್ಕೋಟಿಕ್ ಠಾಣೆಯಲ್ಲಿ ಹಣ ಡಬ್ಲಿಂಗ್ ಜಾಲದ ಆರೋಪದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಇಬ್ಬರನ್ನು ಸಿಸಿಬಿ ತಂಡ ಬಂಧಿಸಿದ್ದು, ಆರೋಪಿಗಳಿಗೆ ಸೇರಿದ ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು.

ಆದರೆ, ಆರೋಪಿಗಳನ್ನು ಪ್ರಕರಣದಿಂದ ಬಚಾವ್ ಮಾಡಲೆಂದು ಹಣ ಕೇಳಿದ್ದಾರೆ ಎನ್ನಲಾಗಿದ್ದು, ಹಣ ಇಲ್ಲದ್ದಕ್ಕೆ ಕಾರು ಮಾರಾಟ ಮಾಡುವಂತೆ ಡೀಲ್ ಆಗಿತ್ತು. ಇದೆಲ್ಲ ನಡೆದು ವಾರ ಕಳೆಯುವಷ್ಟರಲ್ಲಿ ಎಸ್ಐ ಕಬ್ಬಾಳರಾಜ್ ಮಂಗಳೂರಿನಿಂದ ಚಿಕ್ಕಮಗಳೂರಿಗೆ ವರ್ಗ ಆಗಿದ್ದರು. ಇವರಿಗೆ ಸಾಥ್ ನೀಡಿದ್ದಾರೆ ಎನ್ನಲಾಗಿದ್ದ ಅಂದಿನ ಕಮಿಷನರ್ ವಿಕಾಸ್ ಕುಮಾರ್ ಕೂಡ ವರ್ಗ ಆಗಿದ್ದರು. ಆದರೆ, ಕಾರು ಡೀಲಿಂಗ್ ಪ್ರಕರಣ ತಿಂಗಳ ನಂತರ ಲೀಕ್ ಆಗಿದ್ದು, ಈಗ ಮಂಗಳೂರು ಪೊಲೀಸರಿಗೆ ಭಾರೀ ಮುಜುಗರ ತಂದಿಟ್ಟಿದೆ.

ಪ್ರಕರಣದ ಬಗ್ಗೆ ಮಂಗಳೂರು ಡಿಸಿಪಿ ವಿನಯ ಗಾಂವ್ಕರ್ ರಾಜ್ಯದ ಪೊಲೀಸ್ ವರಿಷ್ಠರಿಗೆ ವರದಿ ನೀಡಿದ್ದು, ಅದರಂತೆ ಇಬ್ಬರು ಅಧಿಕಾರಿಗಳನ್ನು ಪ್ರಾಥಮಿಕ ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಅಲ್ಲದೆ, ಹಣ ಡಬ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಾರು ಡೀಲಿಂಗ್ ಪ್ರಕರಣದಲ್ಲಿ ಎಸಿಪಿ ದರ್ಜೆಯ ಒಬ್ಬ ಅಧಿಕಾರಿ ಮತ್ತು ಸಿಸಿಬಿಯಲ್ಲಿದ್ದ ಕೆಲವು ಅಧಿಕಾರಿಗಳ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಾಗಲೇ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದ್ದು, ಉಳಿದವರ ಸರದಿ ಇನ್ನಷ್ಟೇ ಇದೆ ಎನ್ನುವ ಅಂಶವನ್ನು ಪೊಲೀಸ್ ಮೂಲಗಳು ತಿಳಿಸಿವೆ.
Luxury car missing in CCB Police Custody Two Police officers Kabbal Raj and Ramkrishana has been suspended. The order has been issued by DGP, Karnataka.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm