ಬ್ರೇಕಿಂಗ್ ನ್ಯೂಸ್
27-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.27: ಆರೋಪಿಗಳಿಗೆ ಸೇರಿದ ಕಾರನ್ನು ಮಾರಾಟ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಬೆನ್ನಲ್ಲೇ ಆರೋಪ ಕೇಳಿಬಂದ ಇಬ್ಬರು ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಮಾನತು ಮಾಡಿದ್ದಾರೆ.

ಈ ಹಿಂದೆ ಮಂಗಳೂರು ಸಿಸಿಬಿ ತಂಡದಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ಪಾಂಡೇಶ್ವರದ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯ ಇನ್ ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಳೆದ ಅಕ್ಟೋಬರ್ 16ರಂದು ಮಂಗಳೂರಿನ ನಾರ್ಕೋಟಿಕ್ ಠಾಣೆಯಲ್ಲಿ ಹಣ ಡಬ್ಲಿಂಗ್ ಜಾಲದ ಆರೋಪದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಇಬ್ಬರನ್ನು ಸಿಸಿಬಿ ತಂಡ ಬಂಧಿಸಿದ್ದು, ಆರೋಪಿಗಳಿಗೆ ಸೇರಿದ ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು.

ಆದರೆ, ಆರೋಪಿಗಳನ್ನು ಪ್ರಕರಣದಿಂದ ಬಚಾವ್ ಮಾಡಲೆಂದು ಹಣ ಕೇಳಿದ್ದಾರೆ ಎನ್ನಲಾಗಿದ್ದು, ಹಣ ಇಲ್ಲದ್ದಕ್ಕೆ ಕಾರು ಮಾರಾಟ ಮಾಡುವಂತೆ ಡೀಲ್ ಆಗಿತ್ತು. ಇದೆಲ್ಲ ನಡೆದು ವಾರ ಕಳೆಯುವಷ್ಟರಲ್ಲಿ ಎಸ್ಐ ಕಬ್ಬಾಳರಾಜ್ ಮಂಗಳೂರಿನಿಂದ ಚಿಕ್ಕಮಗಳೂರಿಗೆ ವರ್ಗ ಆಗಿದ್ದರು. ಇವರಿಗೆ ಸಾಥ್ ನೀಡಿದ್ದಾರೆ ಎನ್ನಲಾಗಿದ್ದ ಅಂದಿನ ಕಮಿಷನರ್ ವಿಕಾಸ್ ಕುಮಾರ್ ಕೂಡ ವರ್ಗ ಆಗಿದ್ದರು. ಆದರೆ, ಕಾರು ಡೀಲಿಂಗ್ ಪ್ರಕರಣ ತಿಂಗಳ ನಂತರ ಲೀಕ್ ಆಗಿದ್ದು, ಈಗ ಮಂಗಳೂರು ಪೊಲೀಸರಿಗೆ ಭಾರೀ ಮುಜುಗರ ತಂದಿಟ್ಟಿದೆ.

ಪ್ರಕರಣದ ಬಗ್ಗೆ ಮಂಗಳೂರು ಡಿಸಿಪಿ ವಿನಯ ಗಾಂವ್ಕರ್ ರಾಜ್ಯದ ಪೊಲೀಸ್ ವರಿಷ್ಠರಿಗೆ ವರದಿ ನೀಡಿದ್ದು, ಅದರಂತೆ ಇಬ್ಬರು ಅಧಿಕಾರಿಗಳನ್ನು ಪ್ರಾಥಮಿಕ ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಅಲ್ಲದೆ, ಹಣ ಡಬ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಾರು ಡೀಲಿಂಗ್ ಪ್ರಕರಣದಲ್ಲಿ ಎಸಿಪಿ ದರ್ಜೆಯ ಒಬ್ಬ ಅಧಿಕಾರಿ ಮತ್ತು ಸಿಸಿಬಿಯಲ್ಲಿದ್ದ ಕೆಲವು ಅಧಿಕಾರಿಗಳ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಾಗಲೇ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದ್ದು, ಉಳಿದವರ ಸರದಿ ಇನ್ನಷ್ಟೇ ಇದೆ ಎನ್ನುವ ಅಂಶವನ್ನು ಪೊಲೀಸ್ ಮೂಲಗಳು ತಿಳಿಸಿವೆ.
Luxury car missing in CCB Police Custody Two Police officers Kabbal Raj and Ramkrishana has been suspended. The order has been issued by DGP, Karnataka.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm