ಬ್ರೇಕಿಂಗ್ ನ್ಯೂಸ್
27-02-21 03:41 pm Mangalore Correspondent ಕರಾವಳಿ
ಮಂಗಳೂರು, ಫೆ.27: ತನ್ನ ಬಗ್ಗೆ ರಾಜಕೀಯದಲ್ಲಿ ಬಚ್ಚಾ ಎಂದು ಟೀಕಿಸಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ತಿರುಗೇಟು ನೀಡಿದ್ದಾರೆ. ಹೌದು.. ನಾನು ರಾಜಕೀಯದಲ್ಲಿ ಬಚ್ಚಾನೇ.. ಕುಮಾರಸ್ವಾಮಿ ಹವಾಯಿ ಚಪ್ಪಲಿ ಹಾಕ್ಕೊಂಡು ರಾಮನಗರಕ್ಕೆ ಬಂದಿದ್ದಾಗಲೂ ಬಚ್ಚಾನೇ ಆಗಿದ್ದರು ಎಂದು ತಿರುಗೇಟು ನೀಡಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ಬಿನಲ್ಲಿ ಪತ್ರಕರ್ತರ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯೋಗೀಶ್ವರ್, ಕುಮಾರಸ್ವಾಮಿ ಏನಿದ್ದರೂ ಅವಕಾಶವಾದಿ ರಾಜಕಾರಣಿ. ಮೊನ್ನೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ತಮ್ಮ ಪಕ್ಷದ ಬಸವರಾಜ್ ಹೊರಟ್ಟಿಗೆ ಪರಿಷತ್ ಸಭಾಪತಿ ಸ್ಥಾನ ಕೊಡಿಸಿದ್ದರು. ಈಗ ಮೈಸೂರಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನ ಗಿಟ್ಟಿಸಿದ್ದಾರೆ. ಅವರು ಯಾವ ಪಾರ್ಟಿಯಾದರೂ ಅಡ್ಜೆಸ್ಟ್ ಆಗುತ್ತಾರೆ. ಅವಕಾಶವಾದಿ ರಾಜಕಾರಣಿ ಎಂದು ಮೂದಲಿಸಿದರು.
ಕುಮಾರಸ್ವಾಮಿಗೆ ನೈತಿಕತೆ, ಸಿದ್ಧಾಂತ ಯಾವುದೂ ಇಲ್ಲ. ಸಿಎಂ ಆಗಿದ್ದಾಗ ಉಡಾಫೆಯಾಗಿ ಮಾತನಾಡಿದ್ದರು. ಅಧಿಕಾರದಲ್ಲಿದ್ದಾಗ ಜನರ ಬಳಿ ಹೋಗಲಿಲ್ಲ. ಈಗ ಅವರಿಗೆ ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದ್ದು, ದಿನಾ ಬೆಳಗ್ಗೆದ್ದು ಜನರ ಕಡೆ ಹೋಗುತ್ತಿದ್ದಾರೆ. ಕುಮಾರಸ್ವಾಮಿಯವರ ಅವಕಾಶವಾದಿ ಮನಸ್ಥಿತಿಯ ಬಗ್ಗೆ ನಮ್ಮ ಪಕ್ಷದ ವರಿಷ್ಠರಿಗೂ ಎಚ್ಚರಿಸುತ್ತಿದ್ದೇನೆ. ಜನರಿಗೂ ಎಚ್ಚರಿಸುತ್ತಿದ್ದೇನೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ತೊಂದರೆ ಆದೀತು ಎಂದು ಎಚ್ಚರಿಕೆ ನೀಡಿದರು.
ನೀವು ಇಸ್ಪೀಟ್ ಆಡಿದ ಹಣದಲ್ಲಿ ರಾಜ್ಯ ಸರಕಾರವನ್ನು ಬೀಳಿಸಿದ್ದೀರೆಂದು ಕುಮಾರಸ್ವಾಮಿ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗೀಶ್ವರ್, ಇಸ್ಪೀಟ್ ಬಗ್ಗೆ ನಂಗೆ ಗೊತ್ತೇ ಇಲ್ಲ. ಇಸ್ಪೀಟ್ ಆಡಿಯೂ ಗೊತ್ತಿಲ್ಲ. ಆದರೆ, ಕುಮಾರಸ್ವಾಮಿ ಸಿಂಗಾಪುರದಲ್ಲಿ ಇಸ್ಪೀಟ್ ಆಡಿದ್ದು ಗೊತ್ತು. ಅದರ ಫೋಟೋ ಬೇಕಾದರೆ ನನ್ನಲ್ಲಿ ಇವೆ, ಬಿಡುಗಡೆ ಮಾಡಲು ರೆಡಿ ಇದ್ದೇನೆ ಎಂದು ಹೇಳಿದ್ದಾರೆ.
Minister for Environment, Ecology and Tourism C P Yogeshwar in Mangalore alleged that former chief minister (CM) H D Kumaraswamy used to gamble in Singapore and Malaysia.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm