ಬ್ರೇಕಿಂಗ್ ನ್ಯೂಸ್
28-02-21 01:36 pm Mangaluru correspondant ಕರಾವಳಿ
ಮಂಗಳೂರು, ಫೆ.28 : ಕುಮಾರಸ್ವಾಮಿಯನ್ನು ಜೋಕರ್ ಎಂದು ಕರೆದಿದ್ದ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅವರಿಗೆ ಮಂಗಳೂರಿನಲ್ಲಿ ದ.ಕ. ಜಿಲ್ಲಾ ಯುವ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.
ಜೆಡಿಎಸ್ ಯೂತ್ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಕಾರ್ಯಕರ್ತರು ಇಂದು ಬೆಳಗ್ಗೆ ಸಚಿವ ಯೋಗೇಶ್ವರ್ ವಾಸ್ತವ್ಯ ಇದ್ದ ಪಿವಿಎಸ್ ವೃತ್ತದ ಬಳಿಯ ಓಶಿಯನ್ ಪರ್ಲ್ ಹೋಟೆಲ್ ಬಳಿ ಜಮಾಯಿಸಿದ್ದರು. ಬೆಂಗಳೂರಿಗೆ ತೆರಳಲು ಅಣಿಯಾಗುತ್ತಿದ್ದ ಸಚಿವರು ಯುವ ಜೆಡಿಎಸ್ ಕಾರ್ಯಕರ್ತರನ್ನು ಕಂಡು ತಮ್ಮ ಸರಕಾರಿ ವಾಹನ ಬಿಟ್ಟು ಬೇರೆ ವಾಹನದಲ್ಲಿ ಪ್ರಯಾಣಿಸಿದರು. ಇದನ್ನರಿತ ಜೆಡಿಎಸ್ ಕಾರ್ಯಕರ್ತರು ಸಚಿವರ ಎಸ್ಕಾರ್ಟ್ ವಾಹನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ವೇಳೆ ಮಾತನಾಡಿದ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಸಚಿವ ಯೋಗೇಶ್ವರ್ ನಮ್ಮ ನಾಯಕರಾದ ಎಚ್ ಡಿ ಕುಮಾರಸ್ವಾಮಿ ಅವರನ್ನು ಜೋಕರ್ ಎಂದು ಕರೆದಿರುವುದು ಖಂಡನೀಯ. ದ.ಕ. ಜಿಲ್ಲೆಯಲ್ಲಿ ಕೂಡ ಜೆ ಡಿಎಸ್ ಬಲಿಷ್ಠವಾಗಿದೆ ಎನ್ನುವುದನ್ನು ಸಚಿವರು ಮರೆತು ಇಂತಹ ಹೇಳಿಕೆ ನೀಡಿದ್ದು, ನಮ್ಮ ಶಕ್ತಿ ಏನು ಎಂದು ತೋರಿಸಲು ಇಲ್ಲಿ ಅವರ ವಿರುದ್ಧ ಪ್ರತಿಭಟಿಸಿದ್ದೇವೆ. ಆದರೆ ನಮ್ಮನ್ನ ನೋಡಿದ ಸಚಿವರು ಹಿಂಬಾಗಿಲ ಮೂಲಕ ತಪ್ಪಿಸಿಕೊಂಡು ಹೋಗಿದ್ದು ತನ್ನ ಸರಕಾರಿ ವಾಹನದಲ್ಲಿ ಬೇರೆಯವರನ್ನು ಕೂರಿಸಿ ಅವರು ಬೇರೆ ಮಾರ್ಗದಿಂದ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಸಾರ್ವಜನಿಕವಾಗಿ ಅಂತಹ ಕೀಳು ಹೇಳಿಕೆ ನೀಡಿರುವ ಸಚಿವರಿಗೆ ಧೈರ್ಯವಿದ್ದಲ್ಲಿ ನೇರ ಮಾರ್ಗದಿಂದಲೇ ತೆರಳುತ್ತಿದ್ದರು, ಅದನ್ನು ಬಿಟ್ಟು ಹಿಂಬಾಗಿಲಿನಿಂದ ಹೋಗುತ್ತಿರಲಿಲ್ಲ. ಇನ್ನಾದರೂ ಸಚಿವರು ಇಂತಹ ಹೇಳಿಕೆ ನೀಡುವುದನ್ನು ಬಿಟ್ಟು ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ ಎಂದು ಎಚ್ಚರಿಸಿದರು.
ದ.ಕ. ಜಿಲ್ಲಾ ಯುವ ಜನತಾದಳ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಫೈಝಲ್ ಮುಹಮ್ಮದ್, ಯುವ ಜನತಾದಳದ ಮಂಗಳೂರು ಉತ್ತರ ಘಟಕಾಧ್ಯಕ್ಷ ರತೀಶ್ ಕರ್ಕೇರ, ಮಂಗಳೂರು ಉತ್ತರ ಉಪಾಧ್ಯಕ್ಷ ಹಿತೇಶ್ ರೈ, ಯುವ ಜನತಾದಳ ಉಪಾಧ್ಯಕ್ಷ ಮುಹಮ್ಮದ್ ಆಸಿಫ್, ಸತ್ತಾರ್ ಬಂದರ್, ಪ್ರದೀಪ್, ರೋಹಿತ್, ಶ್ರೀನಾಥ್ ಪೂಜಾರಿ ಹಾಗೂ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.
Activists of Dakshina Kannada Youth JD(S) on Sunday February 28 gheraoed tourism minister C P Yogeshwar in the city for calling former chief minister and eminent leader of JD(S) H D Kumaraswamy a 'joker'.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm