ಬ್ರೇಕಿಂಗ್ ನ್ಯೂಸ್
28-02-21 01:36 pm Mangaluru correspondant ಕರಾವಳಿ
ಮಂಗಳೂರು, ಫೆ.28 : ಕುಮಾರಸ್ವಾಮಿಯನ್ನು ಜೋಕರ್ ಎಂದು ಕರೆದಿದ್ದ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅವರಿಗೆ ಮಂಗಳೂರಿನಲ್ಲಿ ದ.ಕ. ಜಿಲ್ಲಾ ಯುವ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.
ಜೆಡಿಎಸ್ ಯೂತ್ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಕಾರ್ಯಕರ್ತರು ಇಂದು ಬೆಳಗ್ಗೆ ಸಚಿವ ಯೋಗೇಶ್ವರ್ ವಾಸ್ತವ್ಯ ಇದ್ದ ಪಿವಿಎಸ್ ವೃತ್ತದ ಬಳಿಯ ಓಶಿಯನ್ ಪರ್ಲ್ ಹೋಟೆಲ್ ಬಳಿ ಜಮಾಯಿಸಿದ್ದರು. ಬೆಂಗಳೂರಿಗೆ ತೆರಳಲು ಅಣಿಯಾಗುತ್ತಿದ್ದ ಸಚಿವರು ಯುವ ಜೆಡಿಎಸ್ ಕಾರ್ಯಕರ್ತರನ್ನು ಕಂಡು ತಮ್ಮ ಸರಕಾರಿ ವಾಹನ ಬಿಟ್ಟು ಬೇರೆ ವಾಹನದಲ್ಲಿ ಪ್ರಯಾಣಿಸಿದರು. ಇದನ್ನರಿತ ಜೆಡಿಎಸ್ ಕಾರ್ಯಕರ್ತರು ಸಚಿವರ ಎಸ್ಕಾರ್ಟ್ ವಾಹನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ವೇಳೆ ಮಾತನಾಡಿದ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಸಚಿವ ಯೋಗೇಶ್ವರ್ ನಮ್ಮ ನಾಯಕರಾದ ಎಚ್ ಡಿ ಕುಮಾರಸ್ವಾಮಿ ಅವರನ್ನು ಜೋಕರ್ ಎಂದು ಕರೆದಿರುವುದು ಖಂಡನೀಯ. ದ.ಕ. ಜಿಲ್ಲೆಯಲ್ಲಿ ಕೂಡ ಜೆ ಡಿಎಸ್ ಬಲಿಷ್ಠವಾಗಿದೆ ಎನ್ನುವುದನ್ನು ಸಚಿವರು ಮರೆತು ಇಂತಹ ಹೇಳಿಕೆ ನೀಡಿದ್ದು, ನಮ್ಮ ಶಕ್ತಿ ಏನು ಎಂದು ತೋರಿಸಲು ಇಲ್ಲಿ ಅವರ ವಿರುದ್ಧ ಪ್ರತಿಭಟಿಸಿದ್ದೇವೆ. ಆದರೆ ನಮ್ಮನ್ನ ನೋಡಿದ ಸಚಿವರು ಹಿಂಬಾಗಿಲ ಮೂಲಕ ತಪ್ಪಿಸಿಕೊಂಡು ಹೋಗಿದ್ದು ತನ್ನ ಸರಕಾರಿ ವಾಹನದಲ್ಲಿ ಬೇರೆಯವರನ್ನು ಕೂರಿಸಿ ಅವರು ಬೇರೆ ಮಾರ್ಗದಿಂದ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಸಾರ್ವಜನಿಕವಾಗಿ ಅಂತಹ ಕೀಳು ಹೇಳಿಕೆ ನೀಡಿರುವ ಸಚಿವರಿಗೆ ಧೈರ್ಯವಿದ್ದಲ್ಲಿ ನೇರ ಮಾರ್ಗದಿಂದಲೇ ತೆರಳುತ್ತಿದ್ದರು, ಅದನ್ನು ಬಿಟ್ಟು ಹಿಂಬಾಗಿಲಿನಿಂದ ಹೋಗುತ್ತಿರಲಿಲ್ಲ. ಇನ್ನಾದರೂ ಸಚಿವರು ಇಂತಹ ಹೇಳಿಕೆ ನೀಡುವುದನ್ನು ಬಿಟ್ಟು ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ ಎಂದು ಎಚ್ಚರಿಸಿದರು.
ದ.ಕ. ಜಿಲ್ಲಾ ಯುವ ಜನತಾದಳ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಫೈಝಲ್ ಮುಹಮ್ಮದ್, ಯುವ ಜನತಾದಳದ ಮಂಗಳೂರು ಉತ್ತರ ಘಟಕಾಧ್ಯಕ್ಷ ರತೀಶ್ ಕರ್ಕೇರ, ಮಂಗಳೂರು ಉತ್ತರ ಉಪಾಧ್ಯಕ್ಷ ಹಿತೇಶ್ ರೈ, ಯುವ ಜನತಾದಳ ಉಪಾಧ್ಯಕ್ಷ ಮುಹಮ್ಮದ್ ಆಸಿಫ್, ಸತ್ತಾರ್ ಬಂದರ್, ಪ್ರದೀಪ್, ರೋಹಿತ್, ಶ್ರೀನಾಥ್ ಪೂಜಾರಿ ಹಾಗೂ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.
Activists of Dakshina Kannada Youth JD(S) on Sunday February 28 gheraoed tourism minister C P Yogeshwar in the city for calling former chief minister and eminent leader of JD(S) H D Kumaraswamy a 'joker'.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm