ಬ್ರೇಕಿಂಗ್ ನ್ಯೂಸ್
19-08-20 10:51 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಕೆಲವು ವಿಚಾರದಲ್ಲಿ ದೇವರು ಕೊಟ್ಟರೂ, ಪೂಜಾರಿ ಕೊಡಲ್ಲ ಎನ್ನುತ್ತಾರೆ. ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ವಿಚಾರದಲ್ಲೂ ಅದೇ ಆಗಿದೆ. ಹೈಕೋರ್ಟ್ ಅನುಮತಿ ಪಡೆದು ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಮತ್ತೆ ವ್ಯಾಪಾರ ಆರಂಭಿಸಲು ಮುಂದಾಗಿದ್ದರು. ಆದರೆ, ಈಗ ಜಿಲ್ಲಾಧಿಕಾರಿಯೇ ವ್ಯಾಪಾರಕ್ಕೆ ತಡೆ ಹಾಕಿದ್ದು ಕೋವಿಡ್ ಹರಡುವ ನೆಪದಲ್ಲಿ ಸೆಂಟ್ರಲ್ ಮಾರುಕಟ್ಟೆ ಅನಿರ್ದಿಷ್ಟವಾಗಿ ಬಂದ್ ಮಾಡುವಂತೆ ಆದೇಶ ಮಾಡಿದ್ದಾರೆ.
ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆ ಪ್ರದೇಶದಲ್ಲಿ ದಿನವೂ ಹೊರ ರಾಜ್ಯದ ಸೇರಿ ಸಾವಿರಾರು ವಾಹನಗಳು ಬಂದು ಹೋಗುತ್ತವೆ. ದಿನ ಒಂದರಲ್ಲಿ 1500 ರಿಂದ ಎರಡು ಸಾವಿರದಷ್ಟು ವ್ಯಾಪಾರಸ್ಥರು ಮತ್ತು ಕಾರ್ಮಿಕರು ಸೇರುತ್ತಾರೆ. ಕಾರ್ಮಿಕರಾಗಲೀ, ವ್ಯಾಪಾರಸ್ಥರು ಆಗಲೀ ಯಾವುದೇ ಕೋವಿಡ್ ನಿಯಮ ಪಾಲನೆಯನ್ನು ಮಾಡುತ್ತಿಲ್ಲ. ಮುಖಗವಸು, ಸಾಮಾಜಿಕ ಅಂತರ ಪಾಲನೆ ಮಾಡದಿರುವ ಕಾರಣ ಸೆಂಟ್ರಲ್ ಮಾರುಕಟ್ಟೆ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲದೆ, ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಅತಿ ಹೆಚ್ಚು 6359 ಸೋಂಕಿತರಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 549 ಮಂದಿಗೆ ಸೋಂಕು ಕಂಡುಬಂದಿದೆ. ಇದೇ ವೇಳೆ ಸೆಂಟ್ರಲ್ ಮಾರುಕಟ್ಟೆ ಪ್ರದೇಶದಲ್ಲಿ 49 ಮಂದಿಗೆ ಸೋಂಕು ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟ 277 ಮಂದಿಯ ಪೈಕಿ 171 ಮಂಗಳೂರಿನವರೇ ಆಗಿದ್ದಾರೆ. ಇವೆಲ್ಲ ಹಿನ್ನೆಲೆಯಲ್ಲಿ ಸೆಂಟ್ರಲ್ ಮಾರುಕಟ್ಟೆ ತೆರೆಯುವುದು ಮತ್ತು ಅಲ್ಲಿ ಜನಜಂಗುಳಿ ಸೇರುವುದು ಅಪಾಯಕಾರಿ ಎಂದು ಪರಿಗಣಿಸಲಾಗಿದೆ. ಈ ಬಗ್ಗೆ ಆಗಸ್ಟ್ 18ರಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಸೆಂಟ್ರಲ್ ಮಾರುಕಟ್ಟೆಯನ್ನು ಮುಂದಿನ ಆದೇಶದ ವರೆಗೆ ಮುಚ್ಚಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಾಕ್ ಡೌನ್ ಬಳಿಕ ಮುಚ್ಚಿದ್ದ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಸ್ಥರಿಗೆ ಬೈಕಂಪಾಡಿಯ ಎಪಿಎಂಸಿಯಲ್ಲಿ ವಹಿವಾಟಿಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಮಾರುಕಟ್ಟೆಯ ವ್ಯಾಪಾರಸ್ಥರು ಹೈಕೋರ್ಟಿಗೆ ದೂರು ಸಲ್ಲಿಸಿ ಮತ್ತೆ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದರು. ವಾರದ ಹಿಂದಷ್ಟೇ ಹೈಕೋರ್ಟ್, ಮಹಾನಗರ ಪಾಲಿಕೆಯ ತಡೆಯಾಜ್ಞೆ ತೆರವುಗೊಳಿಸಿದ್ದು ವ್ಯಾಪಾರಸ್ಥರು ತಮಗೆ ಸಿಕ್ಕ ಜಯ ಎಂದೇ ಭಾವಿಸಿದ್ದರು. ಕೆಲವು ವ್ಯಾಪಾರಸ್ಥರು ಸೆಂಟ್ರಲ್ ಮಾರುಕಟ್ಟೆಯಲ್ಲಿ ಮತ್ತೆ ವ್ಯಾಪಾರವನ್ನೂ ಆರಂಭಿಸಿದ್ದರು. ಮಹಾನಗರ ಪಾಲಿಕೆಯ ಕಮಿಷನರ್ ಮಾತ್ರ, ಈ ತಡೆಯಾಜ್ಞೆ ತೆರವು ಏನಿದ್ದರೂ ತಾತ್ಕಾಲಿಕ ಎನ್ನುತ್ತಿದ್ದರು. ಇದೀಗ ಜಿಲ್ಲಾಧಿಕಾರಿಯೇ ಕೊರೊನಾ ಕಾರಣ ಮುಂದಿಟ್ಟು ಸೆಂಟ್ರಲ್ ಮಾರುಕಟ್ಟೆಯನ್ನು ಪೂರ್ತಿಯಾಗಿ ಮುಚ್ಚಿಸಿದ್ದಾರೆ. ವ್ಯಾಪಾರಸ್ಥರು ಮತ್ತು ಅಧಿಕಾರಿ ವರ್ಗದ ನಡುವಿನ ತಿಕ್ಕಾಟದಲ್ಲಿ ಮತ್ತೆ ಅಧಿಕಾರಸ್ಥರೇ ಜಯ ಕಂಡುಕೊಂಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm