ಬ್ರೇಕಿಂಗ್ ನ್ಯೂಸ್
01-03-21 05:45 pm Mangalore Correspondent ಕರಾವಳಿ
ಬಂಟ್ವಾಳ, ಮಾ.1: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ವಿಪರೀತವಾಗಿ ಏರುತ್ತಿರುವುದನ್ನು ಅಣಕಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.


ತೈಲ ಬೆಲೆ ಏರಿಕೆ ಆಗಿರುವುದರಿಂದ ವಾಹನಗಳ ಉಪಯೋಗ ಸಾಧ್ಯವಾಗದ ಸ್ಥಿತಿ ತಲುಪಿದ್ದು ಹೀಗಾಗಿ ಹಳೆಯ ಕಾಲದ ರೀತಿ ಕತ್ತೆಯಲ್ಲಿ ವಸ್ತುಗಳನ್ನು ತುಂಬಿಕೊಂಡು ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಕೈಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಸ್ವತಃ ರಮಾನಾಥ ರೈ ಸೇರಿದಂತೆ ಕಾರ್ಯಕರ್ತರು ರಸ್ತೆಯುದ್ದಕ್ಕೂ ಎಳೆದುಕೊಂಡು ಮೆರವಣಿಗೆ ನಡೆಸಿದರು. ಈ ಮೂಲಕ ಜನರ ಗಮನ ಸೆಳೆಯಲಾಯಿತು.


ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ನೀತಿಯನ್ನು ಖಂಡಿಸಿದರು.



ಈ ವೇಳೆ ರಮಾನಾಥ ರೈ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಹೀಗೆ ದಿನಬಳಕೆಯ ವಸ್ತುಗಳ ಮೇಲೆ ವಿಪರೀತ ತೆರಿಗೆ ವಿಧಿಸಿದ್ದು ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದ್ದಾರೆ. ಜನ ಸಾಮಾನ್ಯರು ಕೊರೊನಾ ಸಂದರ್ಭದಲ್ಲಿ ತೊಂದರೆ ಅನುಭವಿಸಿದರು. ಈಗ ತೈಲ ಬೆಲೆ ಹೆಸರಲ್ಲಿ ಜನರನ್ನು ಪೀಡಿಸುತ್ತಿದ್ದಾರೆ. ಇದೇ ವೇಳೆ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಿನ ಪ್ಯಾಕೇಜ್ ನೀಡುತ್ತಾರೆ. ಬಡ ಜನರ ಮೇಲೆ ಹೊರೆ ಹೊರಿಸಿ ಕಾರ್ಪೊರೇಟ್ ಕಂಪನಿಗಳ ಹೊಟ್ಟೆ ತುಂಬಿಸುವ ಕೆಲಸ ಯಾಕೆ ? ಇವರು ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನೇ ಮುಂದಿಟ್ಟು ಹೋರಾಟ ಮಾಡಿ ಅಧಿಕಾರಕ್ಕೇರಿದರು. ಈಗ ಯಾಕೆ ಬಿಜೆಪಿಯವರಿಗೆ ತೈಲ ಬೆಲೆ ಇಳಿಸಲು ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.



ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸೇರಿ ಹಲವರು ಪಾಲ್ಗೊಂಡಿದ್ದರು.
Raise in petrol diesel price bantwal Congress leaders protest by making Donkeys pull bikes. Former Minister Ramanth Rai also participated in the protest
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm