ಬ್ರೇಕಿಂಗ್ ನ್ಯೂಸ್
01-03-21 05:45 pm Mangalore Correspondent ಕರಾವಳಿ
ಬಂಟ್ವಾಳ, ಮಾ.1: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ವಿಪರೀತವಾಗಿ ಏರುತ್ತಿರುವುದನ್ನು ಅಣಕಿಸಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.


ತೈಲ ಬೆಲೆ ಏರಿಕೆ ಆಗಿರುವುದರಿಂದ ವಾಹನಗಳ ಉಪಯೋಗ ಸಾಧ್ಯವಾಗದ ಸ್ಥಿತಿ ತಲುಪಿದ್ದು ಹೀಗಾಗಿ ಹಳೆಯ ಕಾಲದ ರೀತಿ ಕತ್ತೆಯಲ್ಲಿ ವಸ್ತುಗಳನ್ನು ತುಂಬಿಕೊಂಡು ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಕೈಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಸ್ವತಃ ರಮಾನಾಥ ರೈ ಸೇರಿದಂತೆ ಕಾರ್ಯಕರ್ತರು ರಸ್ತೆಯುದ್ದಕ್ಕೂ ಎಳೆದುಕೊಂಡು ಮೆರವಣಿಗೆ ನಡೆಸಿದರು. ಈ ಮೂಲಕ ಜನರ ಗಮನ ಸೆಳೆಯಲಾಯಿತು.


ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ನೀತಿಯನ್ನು ಖಂಡಿಸಿದರು.



ಈ ವೇಳೆ ರಮಾನಾಥ ರೈ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಹೀಗೆ ದಿನಬಳಕೆಯ ವಸ್ತುಗಳ ಮೇಲೆ ವಿಪರೀತ ತೆರಿಗೆ ವಿಧಿಸಿದ್ದು ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದ್ದಾರೆ. ಜನ ಸಾಮಾನ್ಯರು ಕೊರೊನಾ ಸಂದರ್ಭದಲ್ಲಿ ತೊಂದರೆ ಅನುಭವಿಸಿದರು. ಈಗ ತೈಲ ಬೆಲೆ ಹೆಸರಲ್ಲಿ ಜನರನ್ನು ಪೀಡಿಸುತ್ತಿದ್ದಾರೆ. ಇದೇ ವೇಳೆ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಿನ ಪ್ಯಾಕೇಜ್ ನೀಡುತ್ತಾರೆ. ಬಡ ಜನರ ಮೇಲೆ ಹೊರೆ ಹೊರಿಸಿ ಕಾರ್ಪೊರೇಟ್ ಕಂಪನಿಗಳ ಹೊಟ್ಟೆ ತುಂಬಿಸುವ ಕೆಲಸ ಯಾಕೆ ? ಇವರು ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನೇ ಮುಂದಿಟ್ಟು ಹೋರಾಟ ಮಾಡಿ ಅಧಿಕಾರಕ್ಕೇರಿದರು. ಈಗ ಯಾಕೆ ಬಿಜೆಪಿಯವರಿಗೆ ತೈಲ ಬೆಲೆ ಇಳಿಸಲು ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.



ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸೇರಿ ಹಲವರು ಪಾಲ್ಗೊಂಡಿದ್ದರು.
Raise in petrol diesel price bantwal Congress leaders protest by making Donkeys pull bikes. Former Minister Ramanth Rai also participated in the protest
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm