ಬ್ರೇಕಿಂಗ್ ನ್ಯೂಸ್
06-03-21 05:44 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಮಗನ ಸ್ಕೂಲ್ ಫೀಸ್ ಕಟ್ಟಲೆಂದು ಎತ್ತಿಟ್ಟಿದ್ದ ಹಣನ್ನು ಹಿಂದಿನ ಸಿಸಿಬಿ ಪೊಲೀಸರು ದೋಚಿದ್ದಾರೆ ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರಿಗೆ ಪಾಂಡೇಶ್ವರ ನಿವಾಸಿ ವಿನಯಾ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ದೂರಿನೊಂದಿಗೆ ಈ ಹಿಂದಿನ ಸಿಸಿಬಿ ಪೊಲೀಸ್ ತಂಡದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
2019ರ ಅಕ್ಟೋಬರ್ನಲ್ಲಿ ಸಿಸಿಬಿ ಅಧಿಕಾರಿಗಳು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಅಂಗಡಿಯ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಪೊಲೀಸರು ಅಂಗಡಿಯಲ್ಲಿದ್ದ ಬ್ಯಾಗ್ನಿಂದ 86,000 ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಣ ಮಗನ ಶಾಲಾ ಶುಲ್ಕಕ್ಕೆ ಇಟ್ಟಿದ್ದಾಗಿತ್ತು. ತನಗೆ ನ್ಯಾಯ ದೊರಕಿಸಿಕೊಡಿ ಎಂದು ಮಹಿಳೆ ವಿನಯ ಗಾಂವ್ಕರ್ ಬಳಿ ದೂರು ನೀಡಿದ್ದಾರೆ.


ಕಬ್ಬಾಳ್ ರಾಜ್ ಮಂಗಳೂರು ಸಿಸಿಬಿ ಎಸ್ಐ ಆಗಿದ್ದಾಗ ಈ ಲೂಟಿ ನಡೆದಿದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಬ್ಬಾಳರಾಜ್ ಎಸ್ಐ ಆಗಿದ್ದ ಸಿಸಿಬಿ ತಂಡದ ವಿರುದ್ಧ ಸರಣಿಯಂತೆ ಆರೋಪ ಕೇಳಿಬಂದಿದ್ದು, ಪೊಲೀಸ್ ವಶದಲ್ಲಿದ್ದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣದಲ್ಲಿ ಈಗಾಗ್ಲೇ ನಾಲ್ವರು ಸಸ್ಪೆಂಡ್ ಆಗಿದ್ದಾರೆ. ಪ್ರಕರಣದಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೀಡಿರುವ ವರದಿ ಆಧರಿಸಿ, ಡಿಜಿಪಿ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿದ್ದಾರೆ.

ಮೂರು ಐಷಾರಾಮಿ ಕಾರುಗಳಲ್ಲಿ ಜಾಗ್ವಾರ್ ಕಾರನ್ನು ಮಾರಾಟ ಮಾಡಿದ್ದು ಸಿಐಡಿಗೆ ಮಂಗಳೂರು ಪೊಲೀಸ್ ಅಧಿಕಾರಿಗಳ ತಂಡ ಎಫ್ಐಆರ್ ಸಹಿತ ವರದಿ ಸಲ್ಲಿಸಿದೆ. ಪಿಎಸ್ಸೈ ಕಬ್ಬಾಳ್ ರಾಜ್, ನಾರ್ಕೋಟಿಕ್ ಇನ್ಸ್ಪೆಕ್ಟರ್ ರಾಮಕೃಷ್ಣ ಮತ್ತು ರಾಜಾ ವಿರುದ್ಧ ವರದಿ ದಾಖಲಾಗಿದ್ದು, ಪೊಲೀಸ್ ಬ್ರೋಕರ್ ದಿವ್ಯದರ್ಶನ್ ವಿರುದ್ಧ ವರದಿ ದಾಖಲಾಗಿದೆ.
Women files complaint on the old CCB police team alleging of stealing money of school fees during a raid at their residence in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm