ಬ್ರೇಕಿಂಗ್ ನ್ಯೂಸ್
07-03-21 12:21 pm Mangalore Correspondent ಕರಾವಳಿ
ಮಂಗಳೂರು, ಮಾ.7; ದೊಡ್ಡಪ್ಪನ ಮಗನಿಗೆ ಬುದ್ಧಿವಾದ ಹೇಳಿದ್ದಕ್ಕೆ ಅಣ್ಣ ತಮ್ಮನನ್ನೇ ಕೊಲೆಗೈದಿದ್ದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಬಂಟ್ವಾಳ ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿ ನಿವಾಸಿ ರಾಜೇಶ್(27) ಶಿಕ್ಷೆಗೊಳಗಾದ ಯುವಕ. ಈತ ತನ್ನ ದೊಡ್ಡಪ್ಪನ ಮಗ ರಂಜಿತ್(27) ಎಂಬಾತನನ್ನು 2017ರ ಮೇ 17 ರಂದು ರಾತ್ರಿ ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ್ದಾನೆ. ಇವರು ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿಯ ನಿವಾಸಿಗಳಾಗಿದ್ದು ಅಣ್ಣ - ತಮ್ಮಂದಿರು. ಆರೋಪಿ ರಾಜನಿಗೆ ವಿಪರೀತ ಮದ್ಯಸೇವನೆ ಚಟವಿತ್ತು. ಆತನಿಗೆ ಹೆತ್ತವರು ಬುದ್ಧಿ ಮಾತು ಹೇಳಿದರೂ ಕೇಳುತ್ತಿರಲಿಲ್ಲ. ಇದರಿಂದ ನೊಂದಿದ್ದ ಆತನ ಹೆತ್ತವರು ರಂಜಿತ್ ಮತ್ತು ಆತನ ತಂದೆ ತಾಯಿಗೆ ಬುದ್ಧಿ ಹೇಳುವಂತೆ ಸೂಚಿಸಿದ್ದರು. ಅದರಂತೆ ರಂಜಿತ್ ಹಲವು ಬಾರಿ ರಾಜೇಶನಿಗೆ ಬುದ್ದಿಮಾತು ಹೇಳಿದ್ದು ರಂಜಿತ್ ಮೇಲೆ ರಾಜೇಶನಿಗೆ ವೈಮನಸ್ಸು ಉಂಟಾಗಿತ್ತು.
ಮೇ 17ರಂದು ಬಿ.ಸಿ ರೋಡ್ ನ ಬಾರ್ ನಲ್ಲಿ ರಾಜೇಶ್ ಆತನ ಗೆಳೆಯರೊಂದಿಗೆ ಮದ್ಯ ಸೇವಿಸುತ್ತಿದ್ದು ರಂಜಿತ್ ಬುದ್ಧಿಮಾತು ಹೇಳಿದ್ದಲ್ಲದೆ ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದಾಗ ಆತನನ್ನು ತಡೆದು ಕೈಯಿಂದ ಹೊಡೆದಿದ್ದ. ಇದರಿಂದ ರಾಜೇಶ್ ಮತ್ತಷ್ಟು ಮುನಿಸಿಕೊಂಡಿದ್ದು ಅದೇ ದಿನ ರಾತ್ರಿ ಹತ್ತು ಗಂಟೆ ವೇಳೆಗೆ ರಂಜಿತ್ ಮನೆಗೆ ತೆರಳಿದ್ದ. ಕೈಯಲ್ಲಿ ಚೂರಿ ಹಿಡಿದುಕೊಂಡು ಹೋಗಿದ್ದ ರಾಜೇಶ್, ಮನೆಯವರನ್ನು ಕರೆದಿದ್ದಾನೆ. ಗಣೇಶ್ ಪೂಜಾರಿ, ಅವರ ಪತ್ನಿ ಲಲಿತಾ ಮತ್ತು ಪುತ್ರ ರಂಜಿತ್ ಹೊರಗೆ ಬಂದಿದ್ದು ಈ ವೇಳೆ ರಾಜೇಶ್ ಚೂರಿಯಿಂದ ರಂಜಿತ್ ನ ಕುತ್ತಿಗೆ ಭಾಗಕ್ಕೆ ತಿವಿದಿದ್ದು ತಡೆಯಲು ಮುಂದಾದ ಗಣೇಶ್ ಪೂಜಾರಿ ಕೈಗೂ ಚೂರಿಯಿಂದ ಗಾಯವಾಗಿತ್ತು. ತೀವ್ರ ಗಾಯಗೊಂಡ ರಂಜಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು ಆತ ಮೃತಪಟ್ಟಿದ್ದ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಗ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿದ್ದ ನಾಗೇಶ್ ಡಿ.ಎಲ್ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
The Mangalore court has sentenced life imprisonment to an Elderly brother for killing his younger brother in Bantwal, Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm