ಬ್ರೇಕಿಂಗ್ ನ್ಯೂಸ್
08-03-21 08:00 pm Mangaluru correspondent ಕರಾವಳಿ
ಮಂಗಳೂರು, ಮಾ.8: ಲಂಚ ಪಡೆದು ಸಿಕ್ಕಿಬಿದ್ದ ಮಂಗಳೂರು ತಾಲೂಕು ಕಚೇರಿಯ ಭೂದಾಖಲೆಗಳ ಸಹಾಯಕರ ಕಚೇರಿಯಲ್ಲಿ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದ ಗಂಗಾಧರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಆರೋಪಿ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿ ಜಾಗವನ್ನು ಅಳತೆ ಮಾಡಿ ನಕಾಶೆಯನ್ನು ನೀಡಲು ಉಳ್ಳಾಲದ ಸೊಹೈಲ್ ಎಂಬವರಿಂದ ಲಂಚದ ರೂಪದಲ್ಲಿ ರೂ.30,000 ಬೇಡಿಕೆ ಇಟ್ಟಿದ್ದ. ಬಳಿಕ ಮಾತುಕತೆ ನಡೆದು ರೂ. 20 ಸಾವಿರಕ್ಕೆ ಒಪ್ಪಿ 3,500 ರೂ. ಮುಂಗಡ ಪಡೆದಿದ್ದ. ಈ ವೇಳೆ, ಎಸಿಬಿಗೆ ತಿಳಿಸಿದ್ದು ಉಳಿಕೆ ಹಣ ರೂ. 16,500 ಸ್ವೀಕರಿಸುತ್ತಿದ್ದಾಗ ಕಳೆದ ಫೆ.23ರಂದು ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿದ್ದರು. ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಮತ್ತು ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಹಾಗೂ ಗುರುರಾಜ್ ಅವರಿದ್ದ ತಂಡ ಆರೋಪಿಯನ್ನು ಬಂದಿಸಿದ್ದರು.

ಆರೋಪಿ ಗಂಗಾಧರ್ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್, ಆರೋಪಿಗಳ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ಸಲ್ಲಿಸಿ, ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲು ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ವಾದಿಸಿದ್ದರು.
Mangalore Bail plea of revenue surveyor who was caught over bribe charges by the ACB officials has been rejected.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm