ಬ್ರೇಕಿಂಗ್ ನ್ಯೂಸ್
08-03-21 08:00 pm Mangaluru correspondent ಕರಾವಳಿ
ಮಂಗಳೂರು, ಮಾ.8: ಲಂಚ ಪಡೆದು ಸಿಕ್ಕಿಬಿದ್ದ ಮಂಗಳೂರು ತಾಲೂಕು ಕಚೇರಿಯ ಭೂದಾಖಲೆಗಳ ಸಹಾಯಕರ ಕಚೇರಿಯಲ್ಲಿ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದ ಗಂಗಾಧರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಆರೋಪಿ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿ ಜಾಗವನ್ನು ಅಳತೆ ಮಾಡಿ ನಕಾಶೆಯನ್ನು ನೀಡಲು ಉಳ್ಳಾಲದ ಸೊಹೈಲ್ ಎಂಬವರಿಂದ ಲಂಚದ ರೂಪದಲ್ಲಿ ರೂ.30,000 ಬೇಡಿಕೆ ಇಟ್ಟಿದ್ದ. ಬಳಿಕ ಮಾತುಕತೆ ನಡೆದು ರೂ. 20 ಸಾವಿರಕ್ಕೆ ಒಪ್ಪಿ 3,500 ರೂ. ಮುಂಗಡ ಪಡೆದಿದ್ದ. ಈ ವೇಳೆ, ಎಸಿಬಿಗೆ ತಿಳಿಸಿದ್ದು ಉಳಿಕೆ ಹಣ ರೂ. 16,500 ಸ್ವೀಕರಿಸುತ್ತಿದ್ದಾಗ ಕಳೆದ ಫೆ.23ರಂದು ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿದ್ದರು. ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಮತ್ತು ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಹಾಗೂ ಗುರುರಾಜ್ ಅವರಿದ್ದ ತಂಡ ಆರೋಪಿಯನ್ನು ಬಂದಿಸಿದ್ದರು.

ಆರೋಪಿ ಗಂಗಾಧರ್ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್, ಆರೋಪಿಗಳ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ಸಲ್ಲಿಸಿ, ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲು ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ವಾದಿಸಿದ್ದರು.
Mangalore Bail plea of revenue surveyor who was caught over bribe charges by the ACB officials has been rejected.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm