ಬ್ರೇಕಿಂಗ್ ನ್ಯೂಸ್
08-03-21 08:00 pm Mangaluru correspondent ಕರಾವಳಿ
ಮಂಗಳೂರು, ಮಾ.8: ಲಂಚ ಪಡೆದು ಸಿಕ್ಕಿಬಿದ್ದ ಮಂಗಳೂರು ತಾಲೂಕು ಕಚೇರಿಯ ಭೂದಾಖಲೆಗಳ ಸಹಾಯಕರ ಕಚೇರಿಯಲ್ಲಿ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದ ಗಂಗಾಧರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಆರೋಪಿ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿ ಜಾಗವನ್ನು ಅಳತೆ ಮಾಡಿ ನಕಾಶೆಯನ್ನು ನೀಡಲು ಉಳ್ಳಾಲದ ಸೊಹೈಲ್ ಎಂಬವರಿಂದ ಲಂಚದ ರೂಪದಲ್ಲಿ ರೂ.30,000 ಬೇಡಿಕೆ ಇಟ್ಟಿದ್ದ. ಬಳಿಕ ಮಾತುಕತೆ ನಡೆದು ರೂ. 20 ಸಾವಿರಕ್ಕೆ ಒಪ್ಪಿ 3,500 ರೂ. ಮುಂಗಡ ಪಡೆದಿದ್ದ. ಈ ವೇಳೆ, ಎಸಿಬಿಗೆ ತಿಳಿಸಿದ್ದು ಉಳಿಕೆ ಹಣ ರೂ. 16,500 ಸ್ವೀಕರಿಸುತ್ತಿದ್ದಾಗ ಕಳೆದ ಫೆ.23ರಂದು ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿದ್ದರು. ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಮತ್ತು ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಹಾಗೂ ಗುರುರಾಜ್ ಅವರಿದ್ದ ತಂಡ ಆರೋಪಿಯನ್ನು ಬಂದಿಸಿದ್ದರು.

ಆರೋಪಿ ಗಂಗಾಧರ್ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್, ಆರೋಪಿಗಳ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ಸಲ್ಲಿಸಿ, ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲು ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ವಾದಿಸಿದ್ದರು.
Mangalore Bail plea of revenue surveyor who was caught over bribe charges by the ACB officials has been rejected.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm