ಬ್ರೇಕಿಂಗ್ ನ್ಯೂಸ್
 
            
                        10-03-21 03:47 pm Mangalore Correspondent ಕರಾವಳಿ
 
            ಉಳ್ಳಾಲ, ಮಾ. 10: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ಅಸಹಜ ರೀತಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಯಾರೋ ಕೊಲೆಗೈದಿರುವ ಪ್ರಬಲ ಶಂಕೆ ವ್ಯಕ್ತವಾಗಿದೆ.

ಕುಂಪಲ ಆಶ್ರಯ ಕಾಲನಿಯ ಮನೆಯಲ್ಲಿ ಘಟನೆ ನಡೆದಿದ್ದು ಸ್ಥಳೀಯ ಗಾಂಜಾ ವ್ಯಸನಿಗಳು ಯುವತಿಯನ್ನು ಕೊಲೆ ಮಾಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಕುಂಪಲ ಆಶ್ರಯ ಕಾಲನಿ ನಿವಾಸಿ ಪ್ರೇಕ್ಷಾ (19) ಮೃತ ದುರ್ದೈವಿ. ಎಚ್ ಪಿ ಗ್ಯಾಸ್ ಏಜನ್ಸಿಯಲ್ಲಿ ಕಾರ್ಮಿಕರಾಗಿರುವ ಚಿತ್ತಪ್ರಸಾದ್ ಮತ್ತು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ವನಿತಾ ದಂಪತಿಯ ಕಿರಿಯ ಪುತ್ರಿ ಪ್ರೇಕ್ಷಾ ಇಂದು ಮಧ್ಯಾಹ್ನ ಮನೆಯ ರೂಮಿನಲ್ಲಿ ಚೂಡಿದಾರದ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೈದಿರುವ ರೀತಿ ಕಂಡುಬಂದಿದೆ. ಆದರೆ, ಬೆಡ್ ಮೇಲೆ ನಿಂತ ಭಂಗಿಯಲ್ಲಿ ಶವ ಇದ್ದು ಕೊಲೆಗೈದು ನೇತು ಹಾಕಿರುವ ಶಂಕೆ ವ್ಯಕ್ತವಾಗಿದೆ.

ತಂದೆ ಚಿತ್ತ ಪ್ರಸಾದ್ ಮತ್ತು ತಾಯಿ ಕೆಲಸಕ್ಕೆ ತೆರಳಿದ್ದು ಪ್ರೇಕ್ಷಾಳ ಅಕ್ಕ ಪ್ರತೀಕ್ಷಾ ಕಾಲೇಜಿಗೆ ತೆರಳಿದ್ದಳು. ಹೀಗಾಗಿ ತಂಗಿ ಪ್ರೇಕ್ಷಾ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ಸ್ಥಳೀಯ ಮಹಿಳೆಯೋರ್ವಳಿಗೆ ಘಟನೆ ಗೊತ್ತಾಗಿದ್ದು ಪ್ರೇಕ್ಷಾ ಬಗ್ಗೆ ಆಕೆಯ ತಾಯಿಗೆ ಮಾಹಿತಿ ನೀಡಿದ್ದಾರೆ. ತಾಯಿ ಮಧ್ಯಾಹ್ನ ಮನೆಗೆ ಬಂದಾಗ ಸಾವಿನ ವಿಚಾರ ಬೆಳಕಿಗೆ ಬಂದಿದೆ.


ಸ್ಥಳೀಯರಾದ ಸೌರವ್, ಯತೀರಾಜ್, ಭವಿತ್ ಎಂಬ ಮೂವರು ಯುವಕರು ಪ್ರೇಕ್ಷಾಳ ಮನೆ ಕಡೆಗೆ ಸ್ಕೂಟರಲ್ಲಿ ಬಂದಿರುವುದನ್ನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನೋರ್ವ ಸ್ಥಳೀಯ ಯುವಕನ ಬಗ್ಗೆಯೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಭವಿತ್ ಸ್ಥಳೀಯ ಕಾಂಗ್ರೆಸ್ ಮುಖಂಡನ ಮಗನಾಗಿದ್ದು ಗಾಂಜಾ ವ್ಯಸನಿಯಾಗಿದ್ದ. ಪ್ರೇಕ್ಷಾ ರೂಪದರ್ಶಿಯಾಗಿದ್ದು ಇಂದು ಮಧ್ಯಾಹ್ನ ಪೋಟೋ ಶೂಟ್ ಗೆ ಬೆಂಗಳೂರಿಗೆ ತೆರಳುವ ಸಿದ್ದತೆಯಲ್ಲಿದ್ದಳು. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Update Report: ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
 
            
            
            A 19-year-old girl who was a model by professional has been found dead in a suspicious way at her house in Kumpala, Ullal, Mangalore. The deceased has been identified as Preksha (19).
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:00 pm
                        
            
                  
                Mangalore Correspondent    
            
                    
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm