ಬ್ರೇಕಿಂಗ್ ನ್ಯೂಸ್
11-03-21 10:28 pm Mangaluru correspondent ಕರಾವಳಿ
ಉಡುಪಿ, ಮಾರ್ಚ್ 11; ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಬಳಿಕ ಸರ್ವೀಸ್ ಬಸ್ಗಳಿಗೆ ಇದ್ದ ವಿನಾಯಿತಿ ರದ್ದುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಮಾರ್ಚ್ 15ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಖಾಸಗಿ ಬಸ್ ಮಾಲೀಕರು ತೀರ್ಮಾನಿಸಿದ್ದಾರೆ.
ಹೆಜಮಾಡಿ ಹಳೆ ಎಂಬಿಸಿ ರಸ್ತೆಯಲ್ಲಿ ಸಂಚಾರ ನಡೆಸುವ ಬಸ್ಗಳ ಮಾಲೀಕರು ಅನಿರ್ಧಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉಡುಪಿ ಕೆನರಾ ಷಟಲ್ ಬಸ್ ಸರ್ವೀಸ್ ಹಾಗೂ ಅದರ ಅಂಗ ಸಂಸ್ಥೆ ಕಿನ್ನಿಗೋಳಿ ವಲಯ ಬಸ್ ಮಾಲೀಕರ ಸಂಘ ಹಾಗೂ ವಿವಿಧ ಟೋಲ್ ವಿರೋಧಿ ಹೋರಾಟ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕಿನ್ನಿಗೋಳಿ ವಲಯ ಬಸ್ ಮಾಲೀಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ಈ ಕುರಿತು ಮಾಹಿತಿ ನೀಡಿದ್ದಾರೆ. "ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎನ್ಎಚ್ಎಐ ಅಧಿಕಾರಿಗಳು ಟೋಲ್ ವಿನಾಯಿತಿ ನೀಡುವ ಆಶ್ವಾಸನೆ ನೀಡಿದ್ದರು" ಎಂದರು.
"ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿವೆ. ಆದ್ದರಿಂದ, ಅನಿವಾರ್ಯವಾಗಿ ಬಸ್ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸಲು ತೀರ್ಮಾನಿಸಿದ್ದೇವೆ. ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶ ಮಾಡಬೇಕು" ಎಂದು ಆಗ್ರಹಿಸಿದ್ದಾರೆ.
ಬಸ್ಗಳಿಗೆ ವಿನಾಯಿತಿ ನೀಡಬೇಕು, ಸುರತ್ಕಲ್ ಟೋಲ್ ತೆರವುಗೊಳಿಸಬೇಕು. ಇಲ್ಲವಾದಲ್ಲಿ ವಿವಿಧ ಸಂಘಟನೆಗಳ ಜೊತೆ ಸೇರಿ ಬೃಹತ್ ಹೋರಾಟ ರೂಪಿಸಲಾಗುತ್ತದೆ. ಟೋಲ್ ಪ್ಲಾಜಾಗಳಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
Private Bus owners of Mangalore to resume services on March 15 as Hejamadi Toll plaza Is not giving them discounted price after Fastag.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm