ಬ್ರೇಕಿಂಗ್ ನ್ಯೂಸ್
12-03-21 08:41 pm Mangaluru correspondent ಕರಾವಳಿ
ಉಳ್ಳಾಲ, ಮಾ.12: ಕುಂಪಲದ ಆಶ್ರಯ ಕಾಲನಿಯ ತನ್ನ ಮನೆಯಲ್ಲೇ ಅನುಮಾನಸ್ಪದವಾಗಿ ಸಾವು ಕಂಡಿದ್ದ ಅಪ್ರಾಪ್ತ ಯುವತಿ, ರೂಪದರ್ಶಿ ಪ್ರೇಕ್ಷಾಳ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

ಸಚಿವ ಅಂಗಾರರಲ್ಲಿ ಮೃತ ಪ್ರೇಕ್ಷಾಳ ತಂದೆ ಚಿತ್ತಪ್ರಸಾದ್ ಅವರು ಅಳಲನ್ನು ತೋಡಿದ್ದಾರೆ. ಮಗಳ ಮಾಡೆಲಿಂಗ್ ಹವ್ಯಾಸಕ್ಕೆ ನಾವು ಸಂಪೂರ್ಣ ಬೆಂಬಲ ನೀಡಿದ್ದೆವು. ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಫೋಟೊ ಶೂಟ್ ತೆರಳಬೇಕಿದ್ದ ನನ್ನ ಮಗಳು ಹೆಣವಾಗಿ ಮಸಣ ಸೇರಿದ್ದರ ಹಿಂದೆ ಕಾಣದ ಕೈಗಳ ನೆರಳಿದೆ. ಶಂಕಿತರ ಹೆಸರನ್ನು ಈಗಾಗಲೇ ಪೊಲೀಸರಿಗೆ ತಿಳಿಸಿದ್ದು ನಮ್ಮ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಸಚಿವರಲ್ಲಿ ವಿನಂತಿಸಿದ್ದಾರೆ.

ಗಾಂಜಾ ಗ್ಯಾಂಗ್ ಮುಂದೆ ಕುಂಪಲ ಗಢ ಗಢ !
ಯುವತಿಯ ಅಸಹಜ ಸಾವಿನ ಬಗ್ಗೆ ಆರಂಭದಲ್ಲೇ ಗಟ್ಟಿ ಧ್ವನಿ ಎತ್ತಿದ್ದ ಸ್ಥಳೀಯ ಮಾಜಿ ಪುರಸಭಾ ಸದಸ್ಯ ಮೋಹನ್ ಶೆಟ್ಟಿ ಈ ಸಾವಿನ ಹಿಂದೆ ಸ್ಥಳೀಯ ಗಾಂಜಾ ಗ್ಯಾಂಗಿನ ಕೈವಾಡದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೂ ಮಾಹಿತಿ ನೀಡಿದ್ದರು. ಈ ಕಾರಣಕ್ಕೋ ಏನೋ ಗುರುವಾರ ಮಧ್ಯರಾತ್ರಿ ಗುಂಪೊಂದು ಮೋಹನ್ ಶೆಟ್ಟಿ ಅವರ ಮನೆಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕುಂಪಲ ಪರಿಸರದ ಶಂಕಿತ ಹತ್ತಕ್ಕೂ ಹೆಚ್ಚು ಗಾಂಜಾ ವ್ಯಸನಿಗಳನ್ನು ವಶಕ್ಕೆ ತೆಗೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆಂದು ತಿಳಿದು ಬಂದಿದೆ.


ಕುಂಪಲ ಪರಿಸರದಲ್ಲಿ ಹದಿಹರೆಯದ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿದ್ದು ಗಾಂಜಾ ವಹಿವಾಟು ನಡೆಸುವ ಹುಡುಗರ ದೊಡ್ಡ ತಂಡವೇ ಕುಂಪಲದಲ್ಲಿ ಸಕ್ರಿಯವಾಗಿದೆ. ಗಾಂಜಾ ಗ್ಯಾಂಗ್ ಇದೀಗ ಕುಂಪಲವನ್ನು ಗಢ ಗಢ ನಡುಗಿಸಲಾರಂಭಿಸಿದೆ. ಸ್ಥಳೀಯರು ಮತ್ತು ಮಾಜಿ ಜಿಪಂ ಉಪಾಧ್ಯಕ್ಷರೂ ಆದ ಸತೀಶ್ ಕುಂಪಲ ಕೂಡ ತನಗೆ ಈ ಹಿಂದೆ ಗಾಂಜಾ ಗುಂಪು ಅಟ್ಯಾಕ್ ಮಾಡಿದ್ದರ ಬಗ್ಗೆ ಸಚಿವರ ಮುಂದೆ ನೋವು ಹೇಳ್ಕೊಂಡಿದ್ದಾರೆ. ಸಚಿವ ಅಂಗಾರ ಅವರು ಗಾಂಜಾ ಮಾಫಿಯಾದ ವಿರುದ್ಧ ಗ್ರಾಮಸ್ಥರೆಲ್ಲರೂ ಒಂದಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.
Suspicious Murder Death of Model girl Preksha in Kumpala in Mangalore, Minister Angara visits her house and consoles family.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm