ಬ್ರೇಕಿಂಗ್ ನ್ಯೂಸ್
12-03-21 08:41 pm Mangaluru correspondent ಕರಾವಳಿ
ಉಳ್ಳಾಲ, ಮಾ.12: ಕುಂಪಲದ ಆಶ್ರಯ ಕಾಲನಿಯ ತನ್ನ ಮನೆಯಲ್ಲೇ ಅನುಮಾನಸ್ಪದವಾಗಿ ಸಾವು ಕಂಡಿದ್ದ ಅಪ್ರಾಪ್ತ ಯುವತಿ, ರೂಪದರ್ಶಿ ಪ್ರೇಕ್ಷಾಳ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

ಸಚಿವ ಅಂಗಾರರಲ್ಲಿ ಮೃತ ಪ್ರೇಕ್ಷಾಳ ತಂದೆ ಚಿತ್ತಪ್ರಸಾದ್ ಅವರು ಅಳಲನ್ನು ತೋಡಿದ್ದಾರೆ. ಮಗಳ ಮಾಡೆಲಿಂಗ್ ಹವ್ಯಾಸಕ್ಕೆ ನಾವು ಸಂಪೂರ್ಣ ಬೆಂಬಲ ನೀಡಿದ್ದೆವು. ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಫೋಟೊ ಶೂಟ್ ತೆರಳಬೇಕಿದ್ದ ನನ್ನ ಮಗಳು ಹೆಣವಾಗಿ ಮಸಣ ಸೇರಿದ್ದರ ಹಿಂದೆ ಕಾಣದ ಕೈಗಳ ನೆರಳಿದೆ. ಶಂಕಿತರ ಹೆಸರನ್ನು ಈಗಾಗಲೇ ಪೊಲೀಸರಿಗೆ ತಿಳಿಸಿದ್ದು ನಮ್ಮ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಸಚಿವರಲ್ಲಿ ವಿನಂತಿಸಿದ್ದಾರೆ.

ಗಾಂಜಾ ಗ್ಯಾಂಗ್ ಮುಂದೆ ಕುಂಪಲ ಗಢ ಗಢ !
ಯುವತಿಯ ಅಸಹಜ ಸಾವಿನ ಬಗ್ಗೆ ಆರಂಭದಲ್ಲೇ ಗಟ್ಟಿ ಧ್ವನಿ ಎತ್ತಿದ್ದ ಸ್ಥಳೀಯ ಮಾಜಿ ಪುರಸಭಾ ಸದಸ್ಯ ಮೋಹನ್ ಶೆಟ್ಟಿ ಈ ಸಾವಿನ ಹಿಂದೆ ಸ್ಥಳೀಯ ಗಾಂಜಾ ಗ್ಯಾಂಗಿನ ಕೈವಾಡದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೂ ಮಾಹಿತಿ ನೀಡಿದ್ದರು. ಈ ಕಾರಣಕ್ಕೋ ಏನೋ ಗುರುವಾರ ಮಧ್ಯರಾತ್ರಿ ಗುಂಪೊಂದು ಮೋಹನ್ ಶೆಟ್ಟಿ ಅವರ ಮನೆಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕುಂಪಲ ಪರಿಸರದ ಶಂಕಿತ ಹತ್ತಕ್ಕೂ ಹೆಚ್ಚು ಗಾಂಜಾ ವ್ಯಸನಿಗಳನ್ನು ವಶಕ್ಕೆ ತೆಗೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆಂದು ತಿಳಿದು ಬಂದಿದೆ.


ಕುಂಪಲ ಪರಿಸರದಲ್ಲಿ ಹದಿಹರೆಯದ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿದ್ದು ಗಾಂಜಾ ವಹಿವಾಟು ನಡೆಸುವ ಹುಡುಗರ ದೊಡ್ಡ ತಂಡವೇ ಕುಂಪಲದಲ್ಲಿ ಸಕ್ರಿಯವಾಗಿದೆ. ಗಾಂಜಾ ಗ್ಯಾಂಗ್ ಇದೀಗ ಕುಂಪಲವನ್ನು ಗಢ ಗಢ ನಡುಗಿಸಲಾರಂಭಿಸಿದೆ. ಸ್ಥಳೀಯರು ಮತ್ತು ಮಾಜಿ ಜಿಪಂ ಉಪಾಧ್ಯಕ್ಷರೂ ಆದ ಸತೀಶ್ ಕುಂಪಲ ಕೂಡ ತನಗೆ ಈ ಹಿಂದೆ ಗಾಂಜಾ ಗುಂಪು ಅಟ್ಯಾಕ್ ಮಾಡಿದ್ದರ ಬಗ್ಗೆ ಸಚಿವರ ಮುಂದೆ ನೋವು ಹೇಳ್ಕೊಂಡಿದ್ದಾರೆ. ಸಚಿವ ಅಂಗಾರ ಅವರು ಗಾಂಜಾ ಮಾಫಿಯಾದ ವಿರುದ್ಧ ಗ್ರಾಮಸ್ಥರೆಲ್ಲರೂ ಒಂದಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.
Suspicious Murder Death of Model girl Preksha in Kumpala in Mangalore, Minister Angara visits her house and consoles family.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm