ಬ್ರೇಕಿಂಗ್ ನ್ಯೂಸ್
12-03-21 09:52 pm Udupi Correspondent ಕರಾವಳಿ
ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.


ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
A Video has gone viral on social media of how Daiva arrives upon yakshagana artist during play at udupi.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am