ಬ್ರೇಕಿಂಗ್ ನ್ಯೂಸ್
12-03-21 09:52 pm Udupi Correspondent ಕರಾವಳಿ
ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.


ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
A Video has gone viral on social media of how Daiva arrives upon yakshagana artist during play at udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm