ಬ್ರೇಕಿಂಗ್ ನ್ಯೂಸ್
14-03-21 11:27 am Mangaluru correspondent ಕರಾವಳಿ
ಉಳ್ಳಾಲ, ಮಾ.14: ಗಾಂಜಾ ಸೇದೋ ಚಾಲಿಪೋಲಿಗಳಿಗೆ ಕುಂಪಲ ಪರಿಸರದ ಜನರು ಹೆದರೋಕೆ ನಾವೇನು ಪಾಕಿಸ್ಥಾನದಲ್ಲಿಲ್ಲ. ಮುಂದೆ ಯಾರಾದರೂ ಗಾಂಜಾ ಸೇದೋದು ಕಂಡುಬಂದರೆ ಅವರನ್ನು ಕುಂಪಲದಿಂದಲೇ ಓಡಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕುಂಪಲ ಪರಿಸರದಲ್ಲಿ ಗಾಂಜಾ ವ್ಯಸನ ಅವ್ಯಾಹತವಾಗಿರುವುದರ ವಿರುದ್ದ ಸ್ಥಳೀಯರ ಒಟ್ಟು ಸೇರುವಿಕೆಯಲ್ಲಿ ಆಶ್ರಯ ಕಾಲನಿಯಿಂದ ಕುಂಪಲ ಶಾಲೆಯ ವರೆಗೆ ಇಂದು ನಡೆದ ಮೌನ ಪ್ರತಿಭಟನೆ ಜಾಥಾವನ್ನುದ್ದೇಶಿಸಿ ಅವರು ಮಾತನಾಡಿದರು.

ಕುಂಪಲ ಆಶ್ರಯ ಕಾಲನಿಯಲ್ಲಿ ಕಳೆದ ಬುಧವಾರ ಅನುಮಾನಸ್ಪದವಾಗಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರೇಕ್ಷಳ ಸಾವಿನ ಹಿಂದೆ ಗಾಂಜಾ ವ್ಯಸನಿಗಳ ಕೈವಾಡವಿದೆಯೆಂಬ ಗಂಭೀರ ಆರೋಪ ಕೇಳಿಬಂದಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸತೀಶ್ ಕುಂಪಲ ಅವರು ಆಶ್ರಯ ಕಾಲನಿಯಲ್ಲಿ ಇಂದು ಮನೆಯಿಂದ ಹೊರಗೆ ಬರಲು ಜನರು ಹೆದರೋ ವಾತಾವರಣ ನಿರ್ಮಾಣವಾಗಿದೆ. ಗಾಂಜಾ ವ್ಯಸನಿಗಳು ಕುಂಪಲದ ಹೆಸರನ್ನ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಹುಟ್ಟಿನಿಂದ ಯಾರೂ ಕೆಟ್ಟವರಲ್ಲ. ಪರಿಸ್ಥಿತಿ ಇಂದು ಕೆಲವು ಯುವಕರನ್ನ ಮಾದಕ ಲೋಕಕ್ಕೆ ಸೆಳೆದಿದೆ. ಸಮಯ ಇನ್ನೂ ಮಿಂಚಿಲ್ಲ.

ಬಲಿಯಾಗಿರುವ ಯುವಕರು ದುಷ್ಚಟಗಳನ್ನು ತ್ಯಜಿಸಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವದ ಜೀವನ ನಡೆಸುವಂತಾಗಬೇಕು. ಗಾಂಜಾವನ್ನು ಮಟ್ಟ ಹಾಕಲು ಪೊಲೀಸರು ಬಹಳಷ್ಟು ಶ್ರಮಿಸುತ್ತಿದ್ದು ಪರಿಸರದ 13 ಯುವಕರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದ್ದು ಅದರಲ್ಲಿ 11 ಜನ ಗಾಂಜಾ ವ್ಯಸನಿಗಳೆಂದು ಧೃಢ ಪಟ್ಟಿದೆ. ಗ್ರಾಮಸ್ಥರೇ ಇಂತಹ ಮಕ್ಕಳ ಪರ ವಹಿಸಿ ಎಂದಿಗೂ ಮಾತನಾಡಬೇಡಿ. ಇವರನ್ನು ಕುಂಪಲದಿಂದಲೇ ಹೊರಗಿಟ್ಟು ತಕ್ಕ ಪಾಠ ಕಲಿಸಬೇಕೆಂದರು.

ಕುಂಪಲದ ಪರಿಸರದ ಹುಡುಗರಿಗೆ ಗಾಂಜಾ ಸರಬರಾಜು ಮಾಡುವವರನ್ನು ಪೊಲೀಸರು ತ್ವರಿತವಾಗಿ ಕಂಡು ಹುಡುಕಬೇಕೆಂದು ಆಗ್ರಹಿಸಿದರು. ಹೊರಗಿನಿಂದ ಬಂದು ಇಲ್ಲಿನ ಯುವಕರನ್ನ ಗಾಂಜಾ ಎಳೆಯಲು ಪ್ರೇರೇಪಿಸುವವರ ವಿರುದ್ಧ ಜನಸಾಮಾನ್ಯರು, ಸಂಘಟನೆಗಳು ಎಚ್ಚೆತ್ತೆಕೊಳ್ಳಬೇಕೆಂದರು.

ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಅನಿಲ್ ಬಗಂಬಿಲ, ಸೋಮೇಶ್ವರ ಪುರಸಭಾ ಮಾಜಿ ಸದಸ್ಯರಾದ ಮೋಹನ್ ಶೆಟ್ಟಿ,ಗಂಗಾಧರ ಗಟ್ಟಿ, ಶಿವಾನಂದ ಟೈಲರ್, ಕಿಶೋರ್ ಕುಂಪಲ, ಅಶೋಕ್ ಕುಂಪಲ, ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ವಿಜಯ್ ಪ್ರಕಾಶ್ ಕುಂಪಲ, ಸ್ಥಳೀಯರಾದ ಚೇತನ್ ಶೆಟ್ಟಿ ಕುಂಪಲ, ನಿವೃತ್ತ ಯೋಧರಾದ ವೆಂಕಟೇಶ್ ಕುಂಪಲ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
ಕುಂಪಲ ; ಬೆಡ್ಡಿನಲ್ಲೇ ನಿಂತ ಸ್ಥಿತಿಯಲ್ಲಿ ಮಾಡೆಲಿಂಗ್ ಯುವತಿ ಸಾವು !! ಗಾಂಜಾ ಗ್ಯಾಂಗಿನಿಂದ ಕೊಲೆ ಶಂಕೆ !
ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
The residents of Kumpala have become fierce after the death of the Model Girl Preksha. Former vice president of Jilla Panchyath Satish has warned of kicking Ganja Youths out of Kampala.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm