ಬ್ರೇಕಿಂಗ್ ನ್ಯೂಸ್
15-03-21 06:11 pm Mangalore Correspondent ಕರಾವಳಿ
ಉಳ್ಳಾಲ, ಮಾ.15: ಕಳೆದೊಂದು ವಾರ ಜವರಾಯ ಉಳ್ಳಾಲದ ಕುಂಪಲದಲ್ಲಿ ಕಂಬಳಿ ಹೊದ್ದು ಮಲಗಿದ್ದನೋ ಏನೋ.. ಯಾಕಂದ್ರೆ, ಒಂದೇ ವಾರದಲ್ಲಿ ಕುಂಪಲ ಪ್ರದೇಶದಲ್ಲಿ ಸರಣಿಯಂತೆ ಮೂವರು ಅಕಾಲಿಕವಾಗಿ ಸಾವು ಕಂಡಿದ್ದಾರೆ. ಕಳೆದ ಸೋಮವಾರದಿಂದ ಶುಕ್ರವಾರದ ನಡುವೆ ಕುಂಪಲದಲ್ಲಿ ಮೂವರು ಅಕಾಲಿಕ ಸಾವನ್ನಪ್ಪಿದ್ದು ಇಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.


ಮಾ.10ರ ಬುಧವಾರ ಆಶ್ರಯ ಕಾಲನಿ ನಿವಾಸಿ ಯುವತಿ ರೂಪದರ್ಶಿ ಪ್ರೇಕ್ಷಾ(17) ಅಸಹಜ ಆತ್ಮಹತ್ಯೆ ಪ್ರಕರಣ ಬಹಳಷ್ಟು ಸುದ್ದಿಯಾಗಿತ್ತು. ಪ್ರಕರಣದಲ್ಲಿ ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಆಕೆಯ ಗೆಳೆಯ ಮುಂಡೋಳಿ ನಿವಾಸಿ ಯತಿನ್ ರಾಜ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಇದೀಗ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಯತಿನ್ ರಾಜ್ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರೂ ಪ್ರೇಕ್ಷಾ ಸಾವಿನ ಬಗ್ಗೆ ಇರುವ ನಿಗೂಢತೆ ಇನ್ನೂ ಹಾಗೆಯೇ ಉಳಿದಿದೆ. ಅಲ್ಲದೆ ಯುವತಿಯ ಸಾವಿಗೆ ಸ್ಥಳೀಯವಾಗಿ ಬೇರೂರಿರುವ ಗಾಂಜಾ ಮಾಫಿಯಾವೇ ಕಾರಣವೆಂದು ಗಾಂಜಾ ವ್ಯಸನಿಗಳ ವಿರುದ್ದ ಕುಂಪಲ ನಿವಾಸಿಗಳು ಅಭಿಯಾನ ಆರಂಭಿಸಿದ್ದಾರೆ.

ಪ್ರೇಕ್ಷಾ ಸಾವಿಗೂ ಎರಡು ದಿನದ ಹಿಂದೆ ಅಂದರೆ, ಮಾ.8ರ ಸೋಮವಾರ ರಾತ್ರಿ ಕುಂಪಲ ಬಾರ್ದೆ ನಿವಾಸಿ ನವ ವಿವಾಹಿತ ಲವಿತ್ ಕುಮಾರ್(34) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಭವಿಷ್ಯದ ಕನಸುಗಳನ್ನು ಹೊತ್ತು ಕಳೆದ ಜನವರಿ ಅಂತ್ಯದಲ್ಲಿ ಹಸೆಮಣೆ ಏರಿದ್ದ ಲವಿತ್ ಅಕಾಲಿಕವಾಗಿ ಸಾವನ್ನಪ್ಪಿದ್ದು ಈ ಭಾಗದ ಜನರನ್ನು ಶೋಕದಲ್ಲಿ ಮುಳುಗಿಸಿತ್ತು. ನಂತರ ಎರಡೇ ದಿನದಲ್ಲಿ ಪ್ರೇಕ್ಷಾ ಅಸಹಜ ಸಾವನ್ನಪ್ಪಿದ್ದಳು.

ತಂದೆಯಾಗಬೇಕಿದ್ದ ನವವಿವಾಹಿತನ ಸಾವು !
ವಾರಾಂತ್ಯದ ಮಾ.12 ರ ಶುಕ್ರವಾರ ರಾತ್ರಿ ಮತ್ತೊಬ್ಬರು ಅಸಹಜ ಸಾವು ಕಂಡಿದ್ದಾರೆ. ಕುಂಪಲ ಮೂರುಕಟ್ಟೆಯ ಬಾಡಿಗೆ ಮನೆ ನಿವಾಸಿ ಮೂಲತಃ ಕಡಬ ಮರ್ದಾಳ ನಿವಾಸಿ ರಾಧಾಕೃಷ್ಣ (40) ಮನೆಯಲ್ಲಿ ಏಕಾಂಗಿ ಇದ್ದ ಸಂದರ್ಭ ಅಧಿಕ ರಕ್ತದೊತ್ತಡದಿಂದ ಬಳಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಎರಡು ವಾರಗಳ ಹಿಂದಷ್ಟೆ ಪತ್ನಿ ಜಯಂತಿಯನ್ನ ಸೀಮಂತ ಶಾಸ್ತ್ರ ಮುಗಿಸಿ ತವರು ಮನೆಗೆ ಕಳಿಸಿಕೊಟ್ಟಿದ್ದ ರಾಧಾಕೃಷ್ಣ ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಕಾಲಿಕ ಸಾವು ಕಂಡಿದ್ದಾರೆ. ಮಧ್ಯರಾತ್ರಿಯಲ್ಲಿ ಬಿಪಿ ಏರಿಳಿತ ಆಗಿದ್ದೇ ಸಾವಿಗೆ ಕಾರಣ ಎನ್ನಲಾಗಿತ್ತು. ಈ ಸಾವು ಕೂಡ ಬೆಳಕಿಗೆ ಬಂದಿದ್ದು ಮರುದಿನವಾಗಿತ್ತು.

ಹೀಗಾಗಿ ಕುಂಪಲ ಪ್ರದೇಶದ ನಿವಾಸಿಗಳಿಗೆ ಕಳೆದ ವಾರವಿಡೀ ಶೋಕದ ದಿನಗಳು. ನೋವು, ವೇದನೆಗಳನ್ನು ಕೊಟ್ಟ ವಾರ. ಇದೇ ವೇದನೆಯ ನಡುವೆ, ಇಲ್ಲಿನ ನಿವಾಸಿಗಳು ಗಾಂಜಾ ವ್ಯಸನಿಗಳ ವಿರುದ್ಧ ಹೋರಾಟವನ್ನೂ ಆರಂಭಿಸಿದ್ದಾರೆ. ಆದರೆ, ಅವರಲ್ಲಿನ ಭೀತಿ ಇನ್ನೂ ತೊಲಗಿಲ್ಲ. ಅಸಹಜ ಸಾವುಗಳೇ ಹಾಗೆ. ಅನಿರೀಕ್ಷಿತ ಆಗಿ ಒದಗುವ ಅಪಘಾತಗಳಂತೆ. ಜೊತೆಗಿದ್ದವರೇ ಇನ್ನಿಲ್ಲವಾಗುತ್ತಾರೆ.. ಕುಂಪಲದ ಜನ ತಮ್ಮ ಒಡನಾಡಿಗಳನ್ನು ಕಳಕೊಂಡಿದ್ದಾರೆ.
Mangalore, Kampala reports three suspicious death in one week. Death of a Model, death of a Man at home and death of a newly married bride groom.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm