ಬ್ರೇಕಿಂಗ್ ನ್ಯೂಸ್
16-03-21 09:35 am Mangaluru correspondent ಕರಾವಳಿ
ಮಂಗಳೂರು, ಮಾ.15: ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ ಡೀಮ್ಡ್ ಯುನಿವರ್ಸಿಟಿಗೆ ಒಳಪಟ್ಟ ಬಹುತೇಕ ಮೆಡಿಕಲ್ ಕಾಲೇಜು ವಿಭಾಗಗಳನ್ನು ದಿಢೀರ್ ಆಗಿ ಮುಚ್ಚಲಾಗಿದೆ.
ಈ ಬಗ್ಗೆ ಯೇನಪೋಯ ವಿವಿಯ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಆಯಾ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ಮುಂದಿನ ಆದೇಶದ ವರೆಗೆ ಕಾಲೇಜು ಮುಚ್ಚುವಂತೆ ಸೂಚನೆ ನೀಡಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಮತ್ತು ರೀಸರ್ಚ್ ಸೆಂಟರ್, ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್, ಆಯುರ್ವೇದ ಕಾಲೇಜು, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಕಾಲೇಜು ವಿಭಾಗವನ್ನು ಮುಚ್ಚುವಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

ಹೀಗಿದ್ದರೂ ಪಿಜಿ ಕಲಿಯುವ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ ಕಾಲೇಜಿಗೆ ಹಾಜರಾಗಲು ಸೂಚಿಸಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಯೂ ಕರ್ತವ್ಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಯಲಿದೆ ಎಂದು ಆದೇಶದಲ್ಲಿ ಹೇಳಿರುವ ರಿಜಿಸ್ಟ್ರಾರ್, ಆದೇಶ ಪತ್ರದಲ್ಲಿ ಕೊರೊನಾ ಸೋಂಕಿನ ಬಗ್ಗೆ ಉಲ್ಲೇಖ ಮಾಡಿಲ್ಲ. ಅದರ ಕಾರಣ ಕಾಲೇಜು ಬಂದ್ ಮಾಡುತ್ತಿದ್ದೇವೆ ಎಂದೂ ತಿಳಿಸಿಲ್ಲ.

ಮಾಹಿತಿ ಪ್ರಕಾರ ಯೇನಪೋಯ ಕಾಲೇಜಿನ ಹಾಸ್ಟೆಲಿನಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ನಿನ್ನೆ ದೃಢಪಟ್ಟಿತ್ತು. ಆದರೆ, ಇಂದು ಅತಿ ಹೆಚ್ಚು ಮಂದಿಗೆ ಸೋಂಕು ಹರಡಿರುವ ಸಾಧ್ಯತೆಯಿದ್ದು ಇಡೀ ಮೆಡಿಕಲ್ ಕಾಲೇಜನ್ನೇ ಬಂದ್ ಮಾಡಿದ್ದಾರೆ.
Health Authorities Shut Yenepoya Medical College as No of Covid cases in students spike up. It is said more than 20 students are tested positive in Yenepoya Hostel in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm