ಬ್ರೇಕಿಂಗ್ ನ್ಯೂಸ್
16-03-21 09:35 am Mangaluru correspondent ಕರಾವಳಿ
ಮಂಗಳೂರು, ಮಾ.15: ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ ಡೀಮ್ಡ್ ಯುನಿವರ್ಸಿಟಿಗೆ ಒಳಪಟ್ಟ ಬಹುತೇಕ ಮೆಡಿಕಲ್ ಕಾಲೇಜು ವಿಭಾಗಗಳನ್ನು ದಿಢೀರ್ ಆಗಿ ಮುಚ್ಚಲಾಗಿದೆ.
ಈ ಬಗ್ಗೆ ಯೇನಪೋಯ ವಿವಿಯ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಆಯಾ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ಮುಂದಿನ ಆದೇಶದ ವರೆಗೆ ಕಾಲೇಜು ಮುಚ್ಚುವಂತೆ ಸೂಚನೆ ನೀಡಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಮತ್ತು ರೀಸರ್ಚ್ ಸೆಂಟರ್, ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್, ಆಯುರ್ವೇದ ಕಾಲೇಜು, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಕಾಲೇಜು ವಿಭಾಗವನ್ನು ಮುಚ್ಚುವಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

ಹೀಗಿದ್ದರೂ ಪಿಜಿ ಕಲಿಯುವ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ ಕಾಲೇಜಿಗೆ ಹಾಜರಾಗಲು ಸೂಚಿಸಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಯೂ ಕರ್ತವ್ಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಯಲಿದೆ ಎಂದು ಆದೇಶದಲ್ಲಿ ಹೇಳಿರುವ ರಿಜಿಸ್ಟ್ರಾರ್, ಆದೇಶ ಪತ್ರದಲ್ಲಿ ಕೊರೊನಾ ಸೋಂಕಿನ ಬಗ್ಗೆ ಉಲ್ಲೇಖ ಮಾಡಿಲ್ಲ. ಅದರ ಕಾರಣ ಕಾಲೇಜು ಬಂದ್ ಮಾಡುತ್ತಿದ್ದೇವೆ ಎಂದೂ ತಿಳಿಸಿಲ್ಲ.

ಮಾಹಿತಿ ಪ್ರಕಾರ ಯೇನಪೋಯ ಕಾಲೇಜಿನ ಹಾಸ್ಟೆಲಿನಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ನಿನ್ನೆ ದೃಢಪಟ್ಟಿತ್ತು. ಆದರೆ, ಇಂದು ಅತಿ ಹೆಚ್ಚು ಮಂದಿಗೆ ಸೋಂಕು ಹರಡಿರುವ ಸಾಧ್ಯತೆಯಿದ್ದು ಇಡೀ ಮೆಡಿಕಲ್ ಕಾಲೇಜನ್ನೇ ಬಂದ್ ಮಾಡಿದ್ದಾರೆ.
Health Authorities Shut Yenepoya Medical College as No of Covid cases in students spike up. It is said more than 20 students are tested positive in Yenepoya Hostel in Mangalore.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm