ಬ್ರೇಕಿಂಗ್ ನ್ಯೂಸ್
17-03-21 01:18 pm Mangalore Correspondent ಕರಾವಳಿ
ಮಂಗಳೂರು, ಮಾ.17: ಮಂಗಳೂರು ನಗರದಲ್ಲಿ ಮತ್ತೆ ಕೊರೊನಾ ಸೋಂಕು ಕಾಲ್ಕೆರೆದುಕೊಂಡು ನಿಂತಿದೆ. ಸದ್ದಿಲ್ಲದೇ ಸೋಂಕು ಹರಡತೊಡಗಿದ್ದು, ಮೆಡಿಕಲ್ ಕಾಲೇಜುಗಳೇ ಕೋವಿಡ್ ಸೋಂಕಿನ ಟಾರ್ಗೆಟ್ ಆಗಿದ್ದಂತೆ ಕಾಣುತ್ತಿದೆ. ದೇರಳಕಟ್ಟೆ ಯೇನಪೋಯ ಮೆಡಿಕಲ್ ಕಾಲೇಜಿನಲ್ಲಿ ಅತ್ಯಧಿಕ ವಿದ್ಯಾರ್ಥಿಗಳು ಮತ್ತು ಸಿಬಂದಿಗೆ ಸೋಂಕು ಕಾಣಿಸಿದ್ದರಿಂದ ಇಡೀ ಕಾಲೇಜನ್ನೇ ಬಂದ್ ಮಾಡಿದೆ.

ಇದೇ ವೇಳೆ, ಮಂಗಳೂರು ನಗರದ ಶ್ರೀದೇವಿ ಡೆಂಟಲ್ ಕಾಲೇಜು ಮತ್ತು ಬಾಸ್ಕೋಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಲ್ಲಿಯೂ ಸೋಂಕು ಕಾಣಿಸಿದೆ. ಶ್ರೀದೇವಿ ಕಾಲೇಜಿನಲ್ಲಿ 50ರಷ್ಟು ಮಂದಿಗೆ ಸೋಂಕು ದೃಢಪಟ್ಟಿದೆ. ಇದೇ ವೇಳೆ, ಬಾಸ್ಕೋಸ್ ಕಾಲೇಜಿನಲ್ಲಿ 12 ಮಂದಿಗೆ ಸೋಂಕು ಕಂಡುಬಂದಿದೆ. ಹೀಗಾಗಿ ಇವೆರಡು ಕಾಲೇಜುಗಳನ್ನೂ ಸೀಲ್ ಡೌನ್ ಮಾಡಲಾಗಿದೆ.
ಯೇನಪೋಯ ಕಾಲೇಜಿನಲ್ಲಿ ಬಹುತೇಕ ಎಲ್ಲ ಮೆಡಿಕಲ್ ಕಾಲೇಜು ವಿಭಾಗಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳಿಗೆ ತರಗತಿಗೆ ರಜೆ ಘೋಷಿಸಿ ಮನೆಗೆ ಕಳುಹಿಸಲಾಗಿದೆ. ಆದರೆ, ಯೇನಪೋಯ ಕಾಲೇಜಿನವರು ತೆಗೆದುಕೊಂಡ ನಿರ್ಧಾರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಗರಂ ಆಗಿದ್ದು, ನೋಟೀಸ್ ಜಾರಿಗೊಳಿಸಿದ್ದಾರೆ.

ಯೇನಪೋಯಕ್ಕೆ ಜಿಲ್ಲಾಧಿಕಾರಿ ನೋಟಿಸ್
ಯೇನಪೋಯದಲ್ಲಿ ಎರಡು ದಿನದ ಅಂತರದಲ್ಲಿ 50ಕ್ಕೂ ಹೆಚ್ಚು ಮಂದಿಗೆ ಸೋಂಕು ಕಂಡುಬಂದಿದೆ ಎನ್ನಲಾಗುತ್ತಿದ್ದು, ಹೀಗಿದ್ದರೂ ಸಂಪರ್ಕಿತರನ್ನು ಪ್ರತ್ಯೇಕವಾಗಿರಿಸದೆ ಮನೆಗೆ ಕಳಿಸಿದ್ದು ಎಷ್ಟು ಸರಿ ಎಂದು ಜಿಲ್ಲಾಧಿಕಾರಿಗಳು ಮೆಡಿಕಲ್ ಕಾಲೇಜು ಆಡಳಿತಾಧಿಕಾರಿಗಳನ್ನು ದಬಾಯಿಸಿದ್ದಾರೆ. ಕೊರೊನಾ ಸೋಂಕು ತಡೆ ನಿರ್ಬಂಧಿತ ಕಾಯ್ದೆ ಮತ್ತು ಕೊರೊನಾ ಸೋಂಕು ಹರಡುವುದನ್ನು ತಪ್ಪಿಸುವ ಕಾಯ್ದೆ ಪ್ರಕಾರ ಯೆನಪೋಯ ಮೆಡಿಕಲ್ ಕಾಲೇಜಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಂಸ್ಥೆಯಾಗಿದ್ದು, ಸಾಂಕ್ರಾಮಿಕ ರೋಗ ನಿಯಂತ್ರಣದ ಕಾನೂನಿನ ಬಗ್ಗೆ ಜ್ಞಾನ ಇಲ್ಲದ ರೀತಿ ವರ್ತಿಸಿದರೆ ಹೇಗೆ ಎಂದು ಜಿಲ್ಲಾಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ. ಯೇನಪೋಯದಲ್ಲಿ ಸೋಂಕು ದೃಢಪಡುತ್ತಿದ್ದಂತೆ, ಎರಡು ದಿನಗಳ ಹಿಂದೆ ಕಾಲೇಜನ್ನು ಪೂರ್ತಿಯಾಗಿ ಬಂದ್ ಮಾಡಿರುವ ಆಡಳಿತ ವಿವಿಧ ಕಡೆಯ ವಿದ್ಯಾರ್ಥಿಗಳಿಗೆ ರಜೆ ನೀಡಿತ್ತು.
ಮಂಗಳೂರಿನ ಮೆಡಿಕಲ್ ಕಾಲೇಜುಗಳಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳೇ ಹೆಚ್ಚಿದ್ದು ಅಲ್ಲಿನ ವಿದ್ಯಾರ್ಥಿಗಳಿಗೇ ಹೆಚ್ಚು ಸೋಂಕು ಕಂಡುಬರುತ್ತಿರುವುದು ಮೆಡಿಕಲ್ ಕಾಲೇಜು ಆಡಳಿತಗಳ ಚಿಂತೆಗೆ ಕಾರಣವಾಗಿದೆ.
ಉಳ್ಳಾಲದ ನರ್ಸಿಂಗ್ ಕಾಲೇಜು, ಹಾಸ್ಟೆಲ್ ಸೀಲ್ ಡೌನ್ ! ಒಂದೇ ದಿನ 40 ವಿದ್ಯಾರ್ಥಿಗಳಿಗೆ ಕೊರೊನಾ !
Mangalore Sridevi college and Boscoss college have been seal down by health authorities after spiking in covid cases in students of colleges.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm