ಬ್ರೇಕಿಂಗ್ ನ್ಯೂಸ್
18-03-21 02:42 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ದೇಶದಲ್ಲಿ 70 ಜಿಲ್ಲೆಗಳನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಪಾಯಕಾರಿ ಜಿಲ್ಲೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡವೂ ಒಳಗೊಂಡಿದೆ ಎನ್ನುವ ವಿಚಾರವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದೃಢಪಡಿಸಿದ್ದಾರೆ.

ಮಾರ್ಚ್ 1ರಿಂದ 15ರ ನಡುವೆ ಕೊರೊನಾ ರಿಪೋರ್ಟ್ ಆಗಿರುವ ಬಗ್ಗೆ ಕೇಂದ್ರ ಸರಕಾರ ಮಾಹಿತಿ ಪಡೆದಿತ್ತು. ದೇಶದ ಎಲ್ಲ ಜಿಲ್ಲೆಗಳಿಂದಲೂ ಪ್ರತಿದಿನ ವರದಿಯಾದ ಕೊರೊನಾ ಪಾಸಿಟಿವ್ ಅಂಕಿ ಅಂಶಗಳನ್ನು ಆಧರಿಸಿ, ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಲಾಗಿದೆ. ಹದಿನೈದು ದಿನಗಳಲ್ಲಿ ಕೊರೊನಾ ಸೋಂಕಿನ ಹೆಚ್ಚಳ ಆಗಿರುವುದನ್ನು ಈ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 70 ಜಿಲ್ಲೆಗಳು ಕರ್ನಾಟಕ, ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿದ್ದು ಈ ಐದು ರಾಜ್ಯಗಳಲ್ಲಿ ಹೆಚ್ಚು ನಿಗಾ ವಹಿಸಲು ಮೋದಿ ಆಯಾ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಸೂಚನೆ ನೀಡಿದ್ದರು. ಅಲ್ಲದೆ, ಪಟ್ಟಿಯಲ್ಲಿರುವ 70 ಜಿಲ್ಲೆಗಳಲ್ಲಿ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಸೂಚನೆ ನೀಡಿದ್ದರು.


ಕರ್ನಾಟಕದಲ್ಲಿ ದಕ್ಷಿಣ ಕನ್ನಡ ನಾಲ್ಕನೇ ಸ್ಥಾನದಲ್ಲಿದ್ದು, ಮೊದಲ ಹಂತದಲ್ಲಿ ಬೀದರ್, ಕಲ್ಬುರ್ಗಿ, ಮೈಸೂರು, ಬೆಂಗಳೂರು ಇದೆ. ಹೈ ರಿಸ್ಕ್ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ಇವೂ ಇದ್ದು, ಸಿಎಂ ಯಡಿಯೂರಪ್ಪ ಈಗಾಗ್ಲೇ ವಿಧಿಸಲಾಗಿರುವ ನಿಯಮಗಳನ್ನು ಬಿಗಿ ಗೊಳಿಸಲು ಸೂಚನೆ ನೀಡಿದ್ದಾರೆ. ಒಳಾಂಗಣದಲ್ಲಿ ನಡೆಯುವ ಯಾವುದೇ ರೀತಿಯ ಮದುವೆ, ಇನ್ನಿತರ ಸಮಾರಂಭಗಳಲ್ಲಿ 200ಕ್ಕು ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು, ಇದರ ಜೊತೆಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚನೆ ಜಿಲ್ಲಾಡಳಿತಗಳಿಗೆ ನೀಡಿದ್ದಾರೆ.
ಮಾಸ್ಕ್ ಧರಿಸದೆ ಹೊರಗೆ ತೆರಳುವಂತಿಲ್ಲ ! ಕೊರೊನಾ ತಡೆಗೆ ಸಿಎಂ ಕಠಿಣ ನಿಯಮ ಜಾರಿ
ಕೊರೊನಾ ಹರಡದಂತೆ ಎಚ್ಚರ ವಹಿಸಿ ; ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ
Covid second wave Dakshina Kannada listed for high-risk zone among India's 70 districts said DC of Mangalore Dr Rajendra Kumar.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm