ಬ್ರೇಕಿಂಗ್ ನ್ಯೂಸ್
18-03-21 02:42 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೊರೊನಾ ಎರಡನೇ ಅಲೆ ಹಬ್ಬುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ದೇಶದಲ್ಲಿ 70 ಜಿಲ್ಲೆಗಳನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಪಾಯಕಾರಿ ಜಿಲ್ಲೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡವೂ ಒಳಗೊಂಡಿದೆ ಎನ್ನುವ ವಿಚಾರವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದೃಢಪಡಿಸಿದ್ದಾರೆ.

ಮಾರ್ಚ್ 1ರಿಂದ 15ರ ನಡುವೆ ಕೊರೊನಾ ರಿಪೋರ್ಟ್ ಆಗಿರುವ ಬಗ್ಗೆ ಕೇಂದ್ರ ಸರಕಾರ ಮಾಹಿತಿ ಪಡೆದಿತ್ತು. ದೇಶದ ಎಲ್ಲ ಜಿಲ್ಲೆಗಳಿಂದಲೂ ಪ್ರತಿದಿನ ವರದಿಯಾದ ಕೊರೊನಾ ಪಾಸಿಟಿವ್ ಅಂಕಿ ಅಂಶಗಳನ್ನು ಆಧರಿಸಿ, ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಲಾಗಿದೆ. ಹದಿನೈದು ದಿನಗಳಲ್ಲಿ ಕೊರೊನಾ ಸೋಂಕಿನ ಹೆಚ್ಚಳ ಆಗಿರುವುದನ್ನು ಈ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 70 ಜಿಲ್ಲೆಗಳು ಕರ್ನಾಟಕ, ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿದ್ದು ಈ ಐದು ರಾಜ್ಯಗಳಲ್ಲಿ ಹೆಚ್ಚು ನಿಗಾ ವಹಿಸಲು ಮೋದಿ ಆಯಾ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಸೂಚನೆ ನೀಡಿದ್ದರು. ಅಲ್ಲದೆ, ಪಟ್ಟಿಯಲ್ಲಿರುವ 70 ಜಿಲ್ಲೆಗಳಲ್ಲಿ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಸೂಚನೆ ನೀಡಿದ್ದರು.


ಕರ್ನಾಟಕದಲ್ಲಿ ದಕ್ಷಿಣ ಕನ್ನಡ ನಾಲ್ಕನೇ ಸ್ಥಾನದಲ್ಲಿದ್ದು, ಮೊದಲ ಹಂತದಲ್ಲಿ ಬೀದರ್, ಕಲ್ಬುರ್ಗಿ, ಮೈಸೂರು, ಬೆಂಗಳೂರು ಇದೆ. ಹೈ ರಿಸ್ಕ್ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ಇವೂ ಇದ್ದು, ಸಿಎಂ ಯಡಿಯೂರಪ್ಪ ಈಗಾಗ್ಲೇ ವಿಧಿಸಲಾಗಿರುವ ನಿಯಮಗಳನ್ನು ಬಿಗಿ ಗೊಳಿಸಲು ಸೂಚನೆ ನೀಡಿದ್ದಾರೆ. ಒಳಾಂಗಣದಲ್ಲಿ ನಡೆಯುವ ಯಾವುದೇ ರೀತಿಯ ಮದುವೆ, ಇನ್ನಿತರ ಸಮಾರಂಭಗಳಲ್ಲಿ 200ಕ್ಕು ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು, ಇದರ ಜೊತೆಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚನೆ ಜಿಲ್ಲಾಡಳಿತಗಳಿಗೆ ನೀಡಿದ್ದಾರೆ.
ಮಾಸ್ಕ್ ಧರಿಸದೆ ಹೊರಗೆ ತೆರಳುವಂತಿಲ್ಲ ! ಕೊರೊನಾ ತಡೆಗೆ ಸಿಎಂ ಕಠಿಣ ನಿಯಮ ಜಾರಿ
ಕೊರೊನಾ ಹರಡದಂತೆ ಎಚ್ಚರ ವಹಿಸಿ ; ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ
Covid second wave Dakshina Kannada listed for high-risk zone among India's 70 districts said DC of Mangalore Dr Rajendra Kumar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm