ಬ್ರೇಕಿಂಗ್ ನ್ಯೂಸ್
18-03-21 05:37 pm Mangalore Correspondent ಕರಾವಳಿ
ಮಂಗಳೂರು, ಮಾ.18 : ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ಕಂಬಳಕ್ಕೂ ತಲಾ ಐದು ಲಕ್ಷ ಸಹಾಯ ಧನ ನೀಡಲು ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ್, ಇತ್ತೀಚೆಗೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5 ಲಕ್ಷ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಂಬಳಕ್ಕೆ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಸಚಿವ ಯೋಗೀಶ್ವರ್ ಹೇಳಿದ್ದರು. ಪ್ರತಿ ಕಂಬಳಕ್ಕೆ ರೂ. 5 ಲಕ್ಷಗಳನ್ನು ಸಹಾಯಧನ ರೂಪದಲ್ಲಿ ನೀಡುವುದಾಗಿ ಹೇಳಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ.50 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ.50 ಲಕ್ಷಗಳನ್ನು ಹೀಗೆ ಒಟ್ಟು ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು. ಆದರೆ, ಈ ಸಹಾಯಧನ ಪಡೆಯಲು ಷರತ್ತು ವಿಧಿಸಲಾಗಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕಂಬಳವನ್ನು ಆಯ್ಕೆ ಮಾಡತಕ್ಕದ್ದು. ಆಯೋಜಿಸಲಾಗುವ ಕಂಬಳವು ಅತ್ಯಧಿಕ ಸಂಖ್ಯೆಯಲ್ಲಿ ಆಕರ್ಷಿಸುವಂತಿರಬೇಕು. ಕಂಬಳವನ್ನು ಒಂದು ಗುಂಪು ಅಥವಾ ತಂಡದಿಂದ ಆಯೋಜಿಸಬೇಕು. ಸದರಿ ತಂಡವು ಒಂದು ಕುಟುಂಬಕ್ಕೆ ಸೇರಿದಂತಿರಬಾರದು. ಮಂಜೂರು ಮಾಡಿದ ಹಣವನ್ನು ಬಳಕೆ ಮಾಡಿದ್ದಕ್ಕೆ ಲೆಕ್ಕ ಪರಿಶೋಧಕರಿಂದ ಲೆಕ್ಕಪಟ್ಟಿಯನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Mangalore Backing Kambala 5 lakhs to every kambala event from government declared Karnataka Tourism Minister C. P. Yogeshwar.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm