ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.
ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm