ಬ್ರೇಕಿಂಗ್ ನ್ಯೂಸ್
19-03-21 06:07 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಭಾರತೀಯ ಜನತಾ ಪಕ್ಷವು ಲಾಭಕ್ಕಾಗಿ ರಾಜಕೀಯ ಮಾಡಲ್ಲ ಎಂಬುದಕ್ಕೆ ಸಂತೋಷ್ ಬೋಳಿಯಾರ್ ಅವರ ಕಾರ್ಯ ವೈಖರಿಯೇ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ ಹೇಳಿದರು.
ಕರ್ನಾಟಕ ಸರಕಾರದ ಉದ್ಯಮ ದಿ ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿ. ಬೆಂಗಳೂರು ಇದರ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ( CSR) ಕಾರ್ಯಕ್ರಮದ ಅಡಿಯಲ್ಲಿ ಬೋಳಿಯಾರಿನ ಅಮರದೀಪ ಸಭಾಂಗಣದಲ್ಲಿ ನಡೆದ ಮಂಗಳೂರು ವಿಧಾನಸಭಾ ಕ್ಷೇತ್ರದ ಆಯ್ದ ಸಮಾಜ ಸೇವೆ ಸಂಸ್ಥೆಗಳು ಮತ್ತು ಶಾಲೆಗಳಿಗೆ ನೀಡಲಾಗುವ ವಿಶೇಷ ನಿಧಿಯ ಚೆಕ್ ವಿತರಣಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿಯು ಲಾಭಕ್ಕಾಗಿ ರಾಜಕೀಯ ಎಂದಿಗೂ ಮಾಡಿಲ್ಲ ಎಂಬುದಕ್ಕೆ ಪೂರಕವಾಗಿ ಸಂತೋಷ್ ರೈಯವರು ತಾನು ಅಧ್ಯಕ್ಷನಾಗಿರುವ ಸಂಸ್ಥೆಯಿಂದ ತನ್ನ ಗ್ರಾಮಕ್ಕೆ ಸುಮಾರು 25 ಲಕ್ಷ ವಿಶೇಷ ಅನುದಾನವನ್ನು ತಂದಿದ್ದಾರೆ. ಇದುವರೆಗೆ ಕಿಯೋನಿಕ್ಸ್ ಮತ್ತು ದಿ ಮೈಸೂರು ಇಲೆಕ್ಟ್ರಿಕಲ್ ಲಿ. ಎರಡು ಸಂಸ್ಥೆ ಹೆಸರು ಯಾರಿಗೂ ಗೊತ್ತಿರಲಿಲ್ಲ. ಈ ಸ್ಥಾನಗಳನ್ನು ಶಾಸಕರು ಅಥವಾ ಸಚಿವರಿಗೆ ಹೆಚ್ಚುವರಿಯಾಗಿ ನೀಡುತ್ತಿದ್ದರು. ಆದರೆ ಬಿಜೆಪಿ ಸರಕಾರವು ಈ ಎರಡು ಸ್ಥಾನಗಳನ್ನು ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ನೀಡಿದೆ. ಸಂತೋಷ್ ಅವರು ನಮ್ಮ ಜಿಲ್ಲೆಯ ಸುಮಾರು 35 ಜನರಿಗೆ ಅವರು ಪ್ರತಿನಿಧಿಸುವ ಸಂಸ್ಥೆಯಲ್ಲಿ ಉದ್ಯೋಗವನ್ನು ಕಲ್ಪಿಸಿ ಕೊಟ್ಟಿದ್ದಾರೆ. ಮುಂದಿನ ವರ್ಷದಲ್ಲಿ ಅವರು ಪ್ರತಿನಿಧಿಸುವ ಸಂಸ್ಥೆಯು ಕೋಟ್ಯಂತರ ರೂಪಾಯಿ ಲಾಭ ಗಳಿಸಲಿ. ಆಗ ಸಿಎಸ್ ಆರ್ ನಿಧಿ ಕೂಡ ಹೆಚ್ಚು ದೊರಕಿ ಜಿಲ್ಲೆಗೆ ಅನುಕೂಲವಾಗುವುದೆಂದರು.

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್, ಬೆಂಗಳೂರಿನ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್ ಮಾತನಾಡಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ಶಾಲೆ ಹಾಗೂ ಸೇವಾ ಸಂಸ್ಥೆಗಳಿಗೆ ಅನುದಾನ ಒದಗಿಸಿಕೊಟ್ಟಿದ್ದು ಈ ಅನುದಾನದಲ್ಲಿ ಯಾವುದೇ ಮಧ್ಯವರ್ತಿಗಳು ನುಸುಳದಂತೆ ನೇರ ಫಲಾನುಭವಿ ಸಂಸ್ಥೆಗಳಿಗೆ ನಿಧಿ ಸಿಗುವಂತೆ ಮಾಡಿದ್ದೇನೆ.

ಇನ್ನೂ ಹಲವಾರು ಸಂಸ್ಥೆಗಳು ವಿಶೇಷ ನಿಧಿಗೆ ಬೇಡಿಕೆ ಇಟ್ಟಿವೆ. ಮುಂದಿನ ದಿವಸಗಳಲ್ಲಿ ನೂರಾರು ಶಾಲೆಗೆ ಅನುದಾನ ಕೊಡುವ ಶಕ್ತಿ ಭಗವಂತನು ತನಗೆ ನೀಡಲಿ ಎಂದರು.

ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲೆಯ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್, ಕ್ಯಾಂಪ್ಕೊ ನಿರ್ದೇಶಕರಾದ ಮಹೇಶ್ ಚೌಟ, ಎಪಿಎಮ್ ಸಿ ಮಾಜಿ ಅಧ್ಯಕ್ಷ ಪ್ರಶಾಂತ್ ಗಟ್ಟಿ, ಹರೇಕಳ ರಾಮಕೃಷ್ಣ ಪ್ರೌಢ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ರವೀಂದ್ರ ರೈ ಮೊದಲಾದವರು ಉಪಸ್ಥಿತರಿದ್ದರು.
25 lakhs cheque donated from Mysore electricals towards ullal bolyar development by President Santosh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm