ಬ್ರೇಕಿಂಗ್ ನ್ಯೂಸ್
20-03-21 11:10 pm Mangaluru correspondent ಕರಾವಳಿ
ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.

ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm