ಬ್ರೇಕಿಂಗ್ ನ್ಯೂಸ್
20-03-21 11:10 pm Mangaluru correspondent ಕರಾವಳಿ
ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.
ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm