ಬ್ರೇಕಿಂಗ್ ನ್ಯೂಸ್
20-03-21 11:10 pm Mangaluru correspondent ಕರಾವಳಿ
ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.

ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm